Sat,May18,2024
ಕನ್ನಡ / English

ಹಿಂದೂ ವಿರೋಧಿ ಪಾಸ್ಟರ್ ಜಾರ್ಜ್ ಪೊನ್ನಯ್ಯ ಹೇಳಿಕೆಯನ್ನು ಅನುಮೋದಿಸುತ್ತಿದ್ದಾರೆ ರಾಹುಲ್ ಗಾಂಧಿ - ಬಿಜೆಪಿ | JANATA NEWS

10 Sep 2022
2672

ಚೆನ್ನೈ : ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಶುಕ್ರವಾರ ಹಿಂದೂ ದ್ವೇಷಿ ಮತ್ತು ವಿವಾದಿತ ಕ್ಯಾಥೋಲಿಕ್ ಪಾದ್ರಿ ಜಾರ್ಜ್ ಪೊನ್ನಯ್ಯ ಅವರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರಿಂದ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ(ಭಾರತ ಸೇರಿಸು) ಯಾತ್ರೆ ಭಾರೀ ಟೀಕೆಗಳನ್ನು ಎದುರಿಸಿತು.

ಕಳೆದ ವರ್ಷ ಜುಲೈನಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಪಾಸ್ಟರ್ ಜಾರ್ಜ್ ಪೊನ್ನಯ್ಯ ಅವರನ್ನು ಬಂಧಿಸಲಾಗಿತ್ತು.

ಪುಲಿಯೂರುಕುರಿಚಿಯ ಮುಟ್ಟಿಡಿಚನ್ ಪರೈ ಚರ್ಚ್‌ನಲ್ಲಿ ಶುಕ್ರವಾರ ಬೆಳಿಗ್ಗೆ ವಿರಾಮಕ್ಕಾಗಿ ಕ್ಯಾಂಪ್ ಮಾಡಿದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.

ತಮಿಳುನಾಡು ಪಾದ್ರಿಯೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಂವಾದದ ವಿಡಿಯೋ ಕ್ಲಿಪ್ ವೈರಲ್ ಆಗಿದ್ದು, ಅದರಲ್ಲಿ ರಾಹುಲ್ ಗಾಂಧಿ "ಯೇಸು ಕ್ರಿಸ್ತ ದೇವರ ರೂಪವೇ? ಅದು ಸರಿಯೇ?" ಎಂದು ಕೇಳುತ್ತಿದ್ದಾರೆ. ಅದಕ್ಕೆ ತಮಿಳುನಾಡಿನ ಅರ್ಚಕ ಜಾರ್ಜ್ ಪೊನ್ನಯ್ಯ, "ಅವನೇ ನಿಜವಾದ ದೇವರು" ಎಂದು ಉತ್ತರಿಸಿದ್ದಾನೆ.

ಪೊನ್ನಯ್ಯ ಮಾತನಾಡಿ, "ದೇವರು ತನ್ನನ್ನು (ಸ್ವತಃ) ಒಬ್ಬ ಮನುಷ್ಯ, ನಿಜವಾದ ವ್ಯಕ್ತಿ ಎಂದು ಬಹಿರಂಗಪಡಿಸುತ್ತಾನೆ ... ಶಕ್ತಿ ಅಥವಾ ಇವೆಲ್ಲವ ತರ ಅಲ್ಲ ... ಆದ್ದರಿಂದ ನಾವು ಮಾನವ ವ್ಯಕ್ತಿಯನ್ನು ನೋಡುತ್ತೇವೆ."

ಪೊನ್ನಯ್ಯ ಅವರು ಈ ಹಿಂದೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಸಂಕಷ್ಟಕ್ಕೆ ಸಿಲುಕಿದ ಇತಿಹಾಸ ಇದೆ. ಕಳೆದ ವರ್ಷ ಜುಲೈನಲ್ಲಿ ಮಧುರೈನ ಕಲ್ಲಿಕುಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಡಿಎಂಕೆ ಸಚಿವರು ಮತ್ತು ಇತರರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿತ್ತು.

ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಾಧ್ಯಮಗಳೊಂದಿಗೆ ಮಾತನಾಡಿದ ಶೆಹಜಾದ್, ಇದು ಭಾರತ್ ಜೋಡೋ ಅಲ್ಲ, ಆದರೆ ರಾಹುಲ್ ಗಾಂಧಿಯವರ ಭಾರತ್ ಥೋಡೋ ಔರ್ ನಫ್ರತ್ ಜೋಡೋ(ಭಾರತ ಒಡೆಯುವ ಮತ್ತು ದ್ವೇಷ ಸೇರಿಸು) ಅಭಿಯಾನ ಆಗಿದೆ. ಅದಕ್ಕಾಗಿಯೇ ಅವರು ಜಾರ್ಜ್ ಪೊನ್ನಯ್ಯ ಅವರಂತಹ ವ್ಯಕ್ತಿಯನ್ನು ಭೇಟಿಯಾದರು, ಅವರನ್ನು ಸ್ಥಳೀಯ ಪೊಲೀಸರು ಹಿಂದೂ ಮತ್ತು ಇಡೀ ಭಾರತ ಮತ್ತು ಭಾರತ ಮಾತೆಯ ವಿರುದ್ಧ ದ್ವೇಷದ ಭಾಷಣಕ್ಕಾಗಿ ಬಂಧಿಸಿದ್ದಾರೆ.

ಅವರು ಮತ್ತಷ್ಟು ಹೇಳಿದರು, "ಶಕ್ತಿಗಿಂತ(ಮತ್ತು ಇತರ ಹಿಂದೂ ದೇವರು) ಭಿನ್ನವಾಗಿ ಯೇಸು ಒಬ್ಬನೇ ದೇವರು, ಎಂದು ರಾಹುಲ್ ಗಾಂಧಿಗೆ ಹೇಳುವ ಜಾರ್ಜ್ ಪೊನ್ನಯ್ಯ ಅವರು ಮೊದಲು ತಮ್ಮ ಮತಾಂಧ ಹೇಳಿಕೆಗಾಗಿ ಬಂಧಿಸಲ್ಪಟ್ಟರು, "ಭಾರತ ಮಾತೆಯ ಕಲ್ಮಶಗಳಿಂದ ನನ್ನನ್ನು ಕಲುಷಿತಗೊಳಿಸಬಾರದು ಎಂದು ನಾನು ಪಾದರಕ್ಷೆಗಳನ್ನು ಧರಿಸುತ್ತೇನೆ ಎಂದು ಹೇಳಿದ್ದು, ಅಂತಹ ವ್ಯಕ್ತಿಗೆ ವೇದಿಕೆ ನೀಡುವ ಮೂಲಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಅನುಮೋದಿಸುತ್ತಿದ್ದಾರೆ, ಎಂದು ಪೂನವಾಲಾ ಆರೋಪಿಸಿದ್ದಾರೆ.

English summary :Rahul Gandhi endorsing anti-Hindu Pastor George Ponnaiahs statement - BJP

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...