ಭಾರೀ ಗಾಳಿ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ಯುವಕ ಸಾವು | JANATA NEWS
ಉತ್ತರ ಕನ್ನಡ : ಭಾರೀ ಗಾಳಿ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ಯುವಕ ಸಾವನ್ನಪ್ಪಿರೋ ಘಟನೆ ಸಿದ್ದಾಪುರ ತಾಲೂಕಿನ ಕ್ಯಾದಗಿಯಲ್ಲಿ ನಡೆದಿದೆ.
ಚಂದ್ರಶೇಖರ ನಾರಾಯಣ ಹಸಲರ್ (23) ಮೃತ ದುರ್ದೈವಿ.
ಮನೆ ಬಿದ್ದ ತಕ್ಷಣ ಗಾಯಾಳು ಚಂದ್ರಶೇಖರ ಅವರನ್ನು ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುಲಾಗುತ್ತಿತ್ತು. ಈ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮನೆ ಶಿಥಿಲಗೊಂಡಿದೆ. ಹಿಗಾಗಿ ತಡರಾತ್ರಿ ಮನೆ ಗೋಡೆ ಕುಸಿದು ಯುವಕನ ಮೇಲೆ ಬಿದ್ದಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
RELATED TOPICS:
English summary :A young man died after the house wall collapsed due to heavy wind and rain