ಅಕ್ರಮ ಸಂಬಂಧಕ್ಕೆ ಬೇಸತ್ತು ತವರು ಸೇರಿದ ಪತ್ನಿ, ವಾಪಾಸ್ ಬರಲು ನಿರಾಕರಿಸಿದಕ್ಕೆ ಗುಂಡು ಹಾರಿಸಿದ ಪತಿ ಅರೆಸ್ಟ್ | JANATA NEWS
ಬೆಳಗಾವಿ : ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ತವರು ಸೇರಿದ ಪತ್ನಿಯ ತವರು ಮನೆಯಿಂದ ಬಾರದ ಹಿನ್ನೆಲೆ ಪತ್ನಿ ಮೇಲೆ ಪತಿ ಗುಂಡು ಹಾರಿಸಿದ್ದ ಘಟನೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಸೆ.11ರಂದು ನಡೆದಿದೆ.
ಶಿವಾನಂದ ಎಂಬುವವರು ತನ್ನ ಪತ್ನಿ ಪ್ರೀತಿ ಮೇಲೆ ಗುಂಡು ಹಾರಿಸಿದ್ದರು. ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆದಾರರಾಗಿರುವ ಶಿವಾನಂದ ಕಾಲೆಬಾಗನನ್ನು ಪೊಲೀಸರು ಬಂಧಿಸಿದ್ದಾರೆ.
4 ವರ್ಷದ ಹಿಂದೆ ಶಿವಾನಂದನನ್ನು ಪ್ರೀತಿ ಮದುವೆಯಾಗಿದ್ದರು. ಅನೈತಿಕ ಸಂಬಂಧ ಹೊಂದಿದ್ದ ಶಿವಾನಂದ ನಿತ್ಯವೂ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಪ್ರೀತಿ ಗಂಡನ ಮನೆಯಿಂದ ತವರು ಮನೆ ಸೇರಿದ್ದರು.
ಅವರ ಮನೆಗೆ ಹೋಗಿದ್ದ ಶಿವಾನಂದ ಕಾಗಲೆ, ವಾಪಸಾಗುವಂತೆ ಪತ್ನಿಯ ಮೇಲೆ ಗುಂಡು ಹಾರಿಸಿದ್ದಾನೆ. ಒಂದು ವೇಳೆ ವಾಪಸ್ ಆಗದಿದ್ದರೆ ಇದೇ ಗುಂಡಿನಿಂದ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ಗುಂಡಿನಿಂದ ತಪ್ಪಿಸಿಕೊಂಡು ಪತ್ನಿ ಪ್ರೀತಿ ಪ್ರಾಣ ಉಳಿಸಿಕೊಂಡಿದ್ದಾರೆ.
ಆದ್ರೆ ಸೆ.11ರ ರಾತ್ರಿ ಏಕಾಏಕಿ ಮನೆಗೆ ಬಂದು ತನ್ನೊಟ್ಟಿಗೆ ಬರುವಂತೆ ಶಿವಾನಂದ ಒತ್ತಾಯಿಸಿದ್ದಾರೆ. ಈ ವೇಳೆ ಬರುವುದಿಲ್ಲ ಅಂದಿದ್ದಕ್ಕೆ ತನ್ನಲ್ಲಿದ್ದ ಪಿಸ್ತೂಲ್ ನಿಂದ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ.
ಎರಡು ಗುಂಡು ಹಾರಿಸಿ ನಾಲ್ಕು ಗುಂಡು ಬಾಕಿ ಇಟ್ಟುಕೊಂಡಿದ್ದ ಶಿವಾನಂದ, ಮನೆಗೆ ಬರಲಿಲ್ಲವೆಂದರೆ ಎರಡು ಗುಂಡು ನಿನಗೆ ಹಾರಿಸಿ ಎರಡು ಗುಂಡು ನಾನು ಹಾರಿಸಿಕೊಳ್ತಿನಿ ಅಂತ ಧಮ್ಕಿ ಹಾಕಿದ್ದಾನೆ. ಪತ್ನಿ ನೀಡಿದ ದೂರಿನನ್ವಯ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.