ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು | JANATA NEWS
ಬೆಳಗಾವಿ : ಧಾರಾಕಾರ ಮಳೆಯಿಂದ ಭಾರೀ ಗಾತ್ರದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಗರದ ಆರ್.ಟಿ.ಓ ಸರ್ಕಲ್ ಬಳಿ ನಡೆದಿದೆ.
ಕಳೆದ ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ದುರ್ಘಟನೆ ಸಂಭವಿಸಿದೆ.
ಬೆಳಗಾವಿ ತಾಲೂಕಿನ ಸಿದ್ದನಹಳ್ಲಿ ಗ್ರಾಮದ ರಾಕೇಶ ಲಗಮಪ್ಪ ಸುಲದಾಳ (22 ವ) ಎಂಬ ಯುವಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಆಂಜನೇಯ ನಗರದ ನೇಮಿರಾಜ ಭೋಪಾಲ ಮರೆಪ್ಪನವರ ಗಾಯಗೊಂಡಿದ್ದಾನೆ.
ತಲೆಯ ಮೇಲೆಯೇ ಮರ ಬಿದ್ದಿದ್ದರಿಂದ ರಾಕೇಶ ಮೃತಪಟ್ಟಿದ್ದಾನೆ. ಎರಡೂ ದ್ವಿಚಕ್ರ ವಾಹನಗಳು ಜಖಂ ಗೊಂಡಿವೆ. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಯು ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.