ಪಿಎಸ್ಐ ನೇಮಕಾತಿ ಅಕ್ರಮ: ಮೈಸೂರು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಅಶ್ವಿನಿ ಅಮಾನತು | JANATA NEWS
ಮೈಸೂರು : ಪಿಎಸ್ಐ ನೇಮಕಾತಿಗೆ ಕುರಿತು ನಡೆದ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪ ಹೊತ್ತ ಮೈಸೂರಿನ ಎನ್.ಆರ್.ಸಂಚಾರ ವಿಭಾಗದ ಇನ್ಸ್ಪೆಕ್ಟರ್ ಅಶ್ವಿನಿ ಅನಂತಪೂರ ಅವರನ್ನು ಅಮಾನತು ಮಾಡಲಾಗಿದೆ.
ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಎಫ್ಡಿಎ ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಆಡಿಯೋ, ವಾಟ್ಸ್ಆಯಪ್ ಸಂದೇಹ ಮತ್ತು ಹಣ ವರ್ಗಾವಣೆ ದಾಖಲೆಗಳು ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಪಿಎಸ್ಐ ಅಶ್ವಿನಿ ಮೂಲತಃ ಜಮಖಂಡಿ ತಾಲೂಕಿನ ಆಲಗೂರು ನಿವಾಸಿಯಾಗಿದ್ದಾರೆ. ಇವರು ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆಯlಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪಿಎಸ್ಐ ಅಶ್ವಿನಿ 2020ರಲ್ಲಿ ನಡೆದಿದ್ದ ಪರೀಕ್ಷೆ ವೇಳೆ, ಎಫ್ಡಿಎ ಕೆಲಸ ಕೊಡಿಸುವುದಾಗಿ, ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ಬಸವರಾಜ ಝಳಕಿ ಎಂಬುವನಿಗೆ ಹೇಳಿದ್ದರು.
ಕೆಲಸ ಕೊಡಿಸಲು ಬಸವರಾಜ ಸೋದರ ಸಂಗಮೇಶ್ ಜೊತೆಗೆ 15 ಲಕ್ಷಕ್ಕೆ ಡೀಲ್ ಮಾಡಿಕೊಂಡಿದ್ದರು. ಮುಂಗಡವಾಗಿ ಅಶ್ವಿನಿ ತಮ್ಮ ತಂದೆಯ ಅಕೌಂಟ್ ಮೂಲಕ 2 ಲಕ್ಷ ಪಡೆದಿದ್ದರು. ಈ ಸಂಬಂಧ ಹಣಕಾಸಿನ ವ್ಯವಹಾರದ ಬಗ್ಗೆ ಮಾತಾಡಿರುವ ಆಡಿಯೋ ವೈರಲ್ ಆಗಿತ್ತು.