Sat,May18,2024
ಕನ್ನಡ / English

ಶಾಲೆ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ | JANATA NEWS

19 Sep 2022
3158

ಬೆಂಗಳೂರು : ಈ ವರ್ಷದಿಂದಲೇ ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಭೋದನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ಪರಿಷತ್​ನಲ್ಲಿಈ ಬಗ್ಗೆ ಮಾತಾಡಿದ ಎಂ.ಕೆ ಪ್ರಾಣೇಶ್​, ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಕೇಳಿದರು.

ಇದಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಸರ್ಕಾರ ಈಗಾಗಲೇ ಭಗವದ್ಗೀತೆಯ ಭೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಅಂತಾ ಸಮಿತಿ ಮಾಹಿತಿ ನೀಡಲಿದೆ. ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಮಕ್ಕಳಿಗೆ ಗೀತೆ ಭೋದನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಗುಜರಾತ್ ಹಾಗೂ ಬನಾರಸ್ ವಿವಿ ಮಾಡಲ್ ಫಾಲೋ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದರು


ಈ ವರ್ಷದಿಂದಲೇ ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಭೋದನೆಗೆ ಶಿಕ್ಷಣ ಇಲಾಖೆ ಚಿಂತಿಸಿದ್ದು ಪ್ರಾಥಮಿಕ ಹಂತದಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 6-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಭೋದನೆಗೆ ಪ್ಲಾನ್ ಮಾಡಿದೆ. ಭಗವದ್ಗೀತೆ, ರಾಮಾಯಣ ಮಹಾಭಾರತದ ತತ್ವಗಳು ಮತ್ತು ಮೌಲ್ಯಗಳನ್ನು ಕಲಿಸಲು ಶಿಕ್ಷಣ ಇಲಾಖೆ ಯೋಜನೆ ರೂಪಿಸುತ್ತಿದೆ.

RELATED TOPICS:
English summary :Teaching Bhagavad Gita in schools and colleges from this year itself

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...