ನಾನು ಸಿಎಂ ಆಗಿದ್ದಾಗ ಮೂಲ ಸೌಕರ್ಯಕ್ಕೆ ಅಡ್ಡಿಯಾಗಿದ್ರೆ, ರಾಜಕೀಯ ನಿವೃತ್ತಿಗೆ ಸಿದ್ಧ: ಹೆಚ್ಡಿಕೆ | JANATA NEWS
ಬೆಂಗಳೂರು : ರಾಜಧಾನಿ ಬೆಂಗಳೂರು ಮಹಾನಗರದ ಮೂಲ ಸೌಕರ್ಯಗಳಿಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ಅಡ್ಡಿಪಡಿಸಿದ್ದೇನೆ ಎಂಬ ಬಗ್ಗೆ ಒಂದು ಪ್ರಕರಣವನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೊನ್ನೆ ಸದನದಲ್ಲಿ ಜೆಡಿಎಸ್ ಆಡಳಿತ ಅವಧಿಯಲ್ಲಿ ಒತ್ತುವರಿ ಆಗಿದೆ ಎಂದು ಹೇಳಿದ್ದಾರೆ. ನಾನು ಬೆಂಗಳೂರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಒಂದು ವೇಳೆ ಒತ್ತುವರಿ ಆಗಿರುವುದನ್ನು ಸಾಬೀತು ಪಡಿಸಿದ್ರೆ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲು ಸಿದ್ಧ ಎಂದು ತಿಳಿಸಿದರು.
ಜೆಡಿಎಸ್ ಕಾಲದಲ್ಲಿ ಆಗಿರುವ ನಿರ್ಧಾರಗಳಿಂದ ಲೋಪ ಆಗಿದೆ ಎಂದು ಕೆಲವರು ಆರೋಪ ಮಾಡಿದ್ದಾರೆ. ನಾನು ಅಧಿಕಾರದಲ್ಲಿ ಇದ್ದಾಗ ಏನಾದರೂ ಲೋಪ ಆಗಿದ್ದರೆ, ಆರೋಪ ಮಾಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡ್ತೀನಿ. ನಾನು ಬೆಂಗಳೂರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ