ದೇವೇಗೌಡರ ಮನೆಗೆ ಬಸವರಾಜ ಬೊಮ್ಮಾಯಿ ಭೇಟಿ! | JANATA NEWS
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಸಿಎಂ ಅವರೊಂದಿಗೆ ಸಚಿವರಾದ ಆರ್.ಅಶೋಕ್, ಮಾಧುಸ್ವಾಮಿ, ಗೋಪಾಲಯ್ಯ, ಬೈರತಿ ಬಸವರಾಜು, ಸೋಮಣ್ಣ, ಮುನಿರತ್ನ ಅವರೂ ಸದನದ ಕಲಾಪದ ನಡುವೆಯೂ ಸಿಎಂ ಬೊಮ್ಮಾಯಿ ಅವರೊಂದಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಭೇಟಿ ವೇಳೆ ಸಿಎಂ ಬೊಮ್ಮಾಯಿಯವರು, ನೀವು ಈಗಲೂ ಮುದ್ದೆ ಊಟ ಮಾಡ್ತೀರಾ ಎಂದು ದೇವೆಗೌಡರನ್ನು ಕೇಳಿದರು. ಬಳಿಕ ಸಿಎಂ, ಸಚಿವರು ದೇವೇಗೌಡರ ನಿವಾಸದಲ್ಲಿ ಮುದ್ದೆ ಊಟ ಸೇವಿಸಿದರು.
RELATED TOPICS:
English summary :Basavaraja Bommayi visits Devegowda house