ಪೊಲೀಸ್ ಠಾಣೆಯಲ್ಲೇ ಪೊಲೀಸರೆದುರು ಬ್ಲೇಡ್ ನಿಂದ ಕುತ್ತಿಗೆ ಕುಯ್ದ ಯುವಕ | JANATA NEWS

ಹುಬ್ಬಳ್ಳಿ : ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಗಣೇಶಪೇಟೆ ಮೀನು ಮಾರುಕಟ್ಟೆಯ ರಾಘವೇಂದ್ರ ನಾಯಕ ಎಂಬಾತನೆ ಕುತ್ತಿಗೆಗೆ ಬ್ಲೇಡ್ ಇರಿದುಕೊಂಡವ.
ಈತನು ಗುರುವಾರ ಇಂಡಿ ಪಂಪ್ ವೃತ್ತ ಬಳಿಯ ಬಿರಿಯಾನಿ ಹೌಸ್ ಅಂಗಡಿಯ ಮಾಲಕರೊಂದಿಗೆ ತಿಂಡಿಗೆ ಚಟ್ನಿ ಕೊಡಲಿಲ್ಲವೆಂದು ಜಗಳ ಮಾಡಿಕೊಂಡಿದ್ದಾನೆ. ಆಗ ಪೊಲೀಸರು ಅಂಗಡಿಯ ಮಾಲಕ ಮತ್ತು ರಾಘವೇಂದ್ರನನ್ನು ವಿಚಾರಣೆಗೆಂದು ಠಾಣೆಗೆ ಕರೆಯಿಸಿದಾರೆ. ಪೊಲೀಸರು ಬಿರಿಯಾನಿ ಹೌಸ್ ಮಾಲೀಕ ಹಾಗೂ ರಾಘವೇಂದ್ರ ಎಂಬ ಯುವಕನನ್ನು ವಿಚಾರಣೆ ಮಾಡುತ್ತಿದ್ದರು.
ಈ ಸಂದರ್ಭದಲ್ಲಿ ಪೊಲೀಸರ ಮುಂದೆಯೇ ರಾಘವೇಂದ್ರ ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಿಂದ ಠಾಣೆಯಲ್ಲಿನ ಸಿಬ್ಬಂದಿ ಆತಂಕಗೊಂಡಿದ್ದಾರೆ. ನಂತರ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
22 ವರ್ಷದ ರಾಘವೇಂದ್ರನು ಹಣಕ್ಕಾಗಿ ಆಗಾಗ ತಾಯಿ ಹಾಗೂ ಸ್ನೇಹಿತರ ಬಳಿ ದುಂಬಾಲು ಬೀಳುತ್ತಿದ್ದ. ಕೊಡದಿದ್ದರೆ ಕುತ್ತಿಗೆಗೆ ಬ್ಲೇಡ್ನಿಂದ ಕೊಯ್ದುಕೊಂಡು ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.