ಜೆಡಿಎಸ್ಗೆ ಶಾಕ್: ಒಂದೇ ದಿನ ಜೆಡಿಎಸ್ನ 100ಕ್ಕೂ ಹೆಚ್ಚು ಕಾರ್ಯಕರ್ತರ ರಾಜೀನಾಮೆ | JANATA NEWS
ತುಮಕೂರು : ಶಾಸಕ ಎಸ್.ಆರ್.ಶ್ರೀನಿವಾಸ್ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಒಂದೇ ದಿನ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.
ಬಿದರೆ ಗ್ರಾಮದ ಕಾರ್ಯಕರ್ತರ ಸಂಖ್ಯೆಯೇ ಹೆಚ್ಚಿನ ಸಂಖ್ಯೆಯಲ್ಲಿದೆ. ಹಾಲಿ ಶಾಸಕ ಎಸ್.ಆರ್.ಶ್ರೀನಿವಾಸ್ಗೆ ಪಕ್ಷದಿಂದ ಅನ್ಯಾಯವಾಗಿದೆ ಎಂದು ಖಂಡಿಸಿರುವ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜೀನಾಮೆ ನೀಡುವವರ ಸಂಖ್ಯೆ ಹೆಚ್ಚಾಗಬಹುದು ಎಂದು ವಿಶ್ಲೇಷಿಸಲಾಗಿದ್ದು, ಇದು ಮುಂದುವರಿದರೆ ಜೆಡಿಎಸ್ಗೆ ತಲೆನೋವಾಗಬಹುದು ಎಂದು ಹೇಳಲಾಗಿದೆ.
ರಾಜೀನಾಮೆ ಕೊಟ್ಟ ಬಳಿಕ ವಾಸಣ್ಣ ಅಭಿಮಾನಿ ಬಳಗ ಸೇರುತ್ತಿದ್ದಾರೆ. ಬೂತ್ ಕಮಿಟಿ ಸೇರಿ ವಿವಿಧ ಹುದ್ದೆಗಳಿಗೆ ಹಲವರು ರಾಜೀನಾಮೆ ನೀಡಿದ್ದಾರೆ.
ಗುಬ್ಬಿಯಲ್ಲಿ 50 ಸಾವಿರಕ್ಕೂ ಅಧಿಕ ಪಕ್ಷದ ಕಾರ್ಯಕರ್ತರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ ಎಂದು ಶಂಕಿಸಲಾಗಿದೆ.