ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ | JANATA NEWS
ಬೆಂಗಳೂರು : ವಿಪಕ್ಷನಾಯಕ ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ವಾಗ್ದಾಳಿ ಮಾಡಿದ್ದಾರೆ.
PFI ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯ ಮಾತನಾಡಿ ಆರ್ಎಸ್ಎಸ್ನಿಂದಲೂ ಸಮಾಜದಲ್ಲಿ ಅಶಾಂತಿ ತಲೆದೋರುತ್ತಿದೆ, ಅದನ್ನೂ ಬ್ಯಾನ್ ಮಾಡಿ ಎಂದು ಹೇಳಿಕೆ ನೀಡಿದ್ದರು.
ಎಲ್ಇಟಿ ಜೊತೆ ಹಾವು ಏಣಿಯಾಟ ಆಡಿದ ಪರಿಣಾಮ ರಾಜೀವ್ ಗಾಂಧಿ ಬಲಿಯಾಗಬೇಕಾಯತು. ಭಾರತ ವಾಸಕ್ಕೆ ಯೋಗ್ಯ ಅಲ್ಲ ಎಂದು ಅನ್ನಿಸಿದವರಿಗೆ ಅಫ್ಘಾನಿಸ್ತಾನ, ಪಾಕಿಸ್ತಾನ ಇದೆ, ಅಲ್ಲಿಗೆ ಫ್ರೀ ವೀಸಾ ಕೊಟ್ಟು ಕಳುಹಿಸುತ್ತೇವೆ ಎಂದು ಕಿಡಿಕಕಾರಿದರು.
ಯಾವ ಭಯೋತ್ಪಾದನೆ ವಿಚಾರದಲ್ಲಿ ಆರ್ಎಸ್ಎಸ್ ಮುಂದಾಗಿದೆ ಎಂದು ತೋರಿಸಲಿ. ಇಂತಹ ಮತಾಂದರಿಂದಲೇ ದೇಶ ವಿಭಜನೆಯಾಗಿದ್ದು. ರಾಷ್ಟ್ರವನ್ನು ಪ್ರೀತಿಸಿ ಅನ್ನೋದು ಭಯೋತ್ಪಾದನೆಯಾ? ಸಿದ್ದರಾಮಯ್ಯನವರೇ.. ವಿಪಕ್ಷನಾಯಕ ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ವಾಗ್ದಾಳಿ ಮಾಡಿದ್ದಾರೆ.
ಉಗ್ರರ ಜೊತೆಗೆ ಯಾವ ರೀತಿ ಹಾಟ್ ಲೈನ್ ಕನೆಕ್ಷನ್ ಇದೆ ಎಂಬುದಕ್ಕೆ ಆಲ್ ಜವಾಹಿರಿ ಹಿಜಾಬ್ ಬೆಂಬಲಿಸಿ ಶಾಯಿರಿ ಹೇಳಿದ್ದೇ ಒಂದು ಸ್ಯಾಂಪಲ್ ಆಗಿದೆ. ಸುಣ್ಣ ಮತ್ತು ಬೆಣ್ಣೆ ಗುರುತಿಸದಂತಹ ಸ್ಥಿತಿಗೆ ಸಿದ್ದರಾಮಯ್ಯ ಬಂದಿದ್ದಾರೆ ಅನ್ನಿಸುತ್ತದೆ. ಯಾವ ಪ್ರಾಮಾಣಿಕತೆ ಇದೆ ಸಿದ್ದರಾಮಯ್ಯಗೆ? ಆರ್ ಎಸ್ ಎಸ್ ಯಾವ ಯಾವ ವಿಧ್ವಂಸಕ ಕೃತ್ಯದಲ್ಲಿ ತೊಡಗಿದೆ ಅಂತಾ ಸಿದ್ದರಾಮಯ್ಯ ಹೇಳಲಿ. ರಾಜಕೀಯ ತೆವಲಿಗೆ ಹೇಳುವುದನ್ನು ಬಿಡಲಿ ಎಂದು ಕಿಡಿ ಕಾರಿದರು.