ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ | JANATA NEWS
ಲಕ್ನೋ : ಸಮಾಜವಾದಿ ಪಕ್ಷದ(ಸ.ಪಾ) ಮಾಜಿ ಸರ್ವೋಚ್ಚ ನಾಯಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ದೀರ್ಘಕಾಲದ ಅನಾರೋಗ್ಯದ ನಂತರ ಸೋಮವಾರ ನಿಧನರಾದರು. 82 ವರ್ಷದ ಸ.ಪಾ. ನಾಯಕ ಆಗಸ್ಟ್ 22 ರಿಂದ ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸ.ಪಾ. ಮುಖ್ಯಸ್ಥರ ಆರೋಗ್ಯ ವಿಚಾರಿಸಲು ಹಲವು ಮುಖಂಡರು ಈ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಸಿಎಂ ಯೋಗಿ ಆದಿತ್ಯನಾಥ್ ಸಕಲ ಸರ್ಕಾರಿ ಗೌರವಗಳೊಂದಿಗೆ ಮುಲಾಯಂ ಅವರ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಹೇಳಿದ್ದಾರೆ. ಅಲ್ಲದೇ, ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಉತ್ತರ ಪ್ರದೇಶ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಮುಲಾಯಂ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಇಟಾವಾದಲ್ಲಿರುವ ಸೈಫೈ ಗ್ರಾಮದಲ್ಲಿ ನಡೆಯಲಿದೆ ಎಂದು ಸಮಾಜವಾದಿ ಪಕ್ಷ ತಿಳಿಸಿದೆ.