ಜೋಡೋ ಯಾತ್ರೆಯಲ್ಲಿ ಮಕ್ಕಳ ದುರುಪಯೋಗ ಆರೋಪ: ಮಕ್ಕಳ ಆಯೋಗಕ್ಕೆ ಉತ್ತರ ನೀಡಲಾಗಿದೆ | JANATA NEWS
ಚಿತ್ರದುರ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಮಕ್ಕಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.
ಈ ಸಂಬಂಧ ಮಕ್ಕಳ ಆಯೋಗದವರು ನೋಟಿಸ್ ನೀಡಿದ್ದರು. ಪಕ್ಷದಿಂದ 50 ಪುಟಗಳ ಉತ್ತರ ನೀಡಲಾಗಿದೆ ಎಂದು ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಪಕ್ಷ, ಜಾತಿ, ಧರ್ಮ ಇಲ್ಲ. ಮಕ್ಕಳೊಂದಿಗೆ ಬಂದು ಯಾರು ಬೇಕಾದರೂ ಭಾಗವಹಿಸಬಹುದು ಎಂದು ಹೇಳಿದರು.
ಗಾಂಧಿ ಕುಟುಂಬದ ಮೊಮ್ಮಗನ ಯಾತ್ರೆಗೆ ಜನರು ಬರುತ್ತಿದ್ದಾರೆ. ರಾಜಕಾರಣಕ್ಕೆ ಮಕ್ಕಳನ್ನು ಬಳಸಿಕೊಳ್ಳುವ ಅಗತ್ಯ ಕಾಂಗ್ರೆಸ್ಗಿಲ್ಲ. ಮಕ್ಕಳ ಅಭಿವೃದ್ಧಿಗಾಗಿ ಕಾಂಗ್ರೆಸ್ ಹಲವು ಯೋಜನೆ ರೂಪಿಸಿದೆ. ರಾಜಕೀಯಕ್ಕಾಗಿ ಮಕ್ಕಳ ಆಯೋಗಕ್ಕೆ ದೂರು ದಾಖಲಿಸಿದ್ದಾರೆ. ಜನರು ತೋರುವ ಪ್ರೀತಿ ಸಹಿಸದೇ ದೂರು ದಾಖಲಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.