Tue,Sep26,2023
ಕನ್ನಡ / English

ಭಾರತ್ ಜೋಡೋ ಯಾರನ್ನು ಜೋಡಿಸುತ್ತಿದೆ ಹಾಗೂ ಯಾರನ್ನು ಒಡೆಯುತ್ತಿದೆ ಎಂದು ಜಗತ್ತಿಗೆ ಗೊತ್ತಿದೆ: ಸಿಎಂ | JANATA NEWS

11 Oct 2022
1156

ಬೆಂಗಳೂರು : ಭಾರತ್ ಜೋಡೋ ಯಾರನ್ನು ಜೋಡಿಸುತ್ತಿದೆ ಹಾಗೂ ಯಾರನ್ನು ಒಡೆಯುತ್ತಿದೆ ಎಂದು ಜಗತ್ತಿಗೆ ಗೊತ್ತು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ರೇಸ್ ಕೋರ್ಸ್ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ನಿರಂತರವಾಗಿ ಕಾರ್ಯಕ್ರಮ ಮಾಡಿಕೊಂಡು ಬಂದಿದೆ. ಈಗ ಜನಸಂಕಲ್ಪ ಯಾತ್ರೆ ಪ್ರಾರಂಭ ಮಾಡುತ್ತಿದ್ದೇವೆ. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಯಾತ್ರೆ ಪ್ರಾರಂಭವಾಗಲಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಕಾರ್ಯಕ್ರಮ, ಕೆಲಸಗಳು, ನೀತಿಗಳು ಮತ್ತು ಕೇಂದ್ರದ ಕಾರ್ಯಕ್ರಮಗಳು, ಒಂದೊಂದು ಕ್ಷೇತ್ರದಲ್ಲಿ ಸಾವಿರಾರು ಜನಕ್ಕೆ ಅನುಕೂಲವಾಗಿದೆ.ಅದನ್ನು ಜನರಿಗೆ ಹೇಳಿ ಮುಂದಿನ ದಿನ ಯಾವ ವರ್ಗಕ್ಕೆ ಕಾರ್ಯಕ್ರಮ ಮಾಡಲಿದ್ದೇವೆ.

ಯಾವ ರೀತಿ ಲಾಭ ತೆಗೆದುಕೊಳ್ಳಬೇಕು ಎಂದು ಹೀಗೆ ಹತ್ತು ಹಲವು ವಿಷಯ ಜನರಿಗೆ ತಿಳಿಸಲಿದ್ದೇವೆ. ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಚುನಾವಣೆಗೆ ಸಜ್ಜಾಗಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ಕಾರ್ಯಕ್ರಮ ಮಾಡಲಿದ್ದೇವೆ ಎಂದು ತಿಳಿಸಿದರು.

ಸರ್ಕಾರದ ಯೋಜನೆಗಳ ಲಾಭವನ್ನು ಮುಂದಿನ ದಿನಗಳಲ್ಲಿ ಜನರು ಯಾವ ರೀತಿ ತೆಗೆದುಕೊಳ್ಳಬೇಕು ಎಂಬ ತೀರ್ಮಾನದ ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ. ಜೊತೆಗೆ ಬಿಜೆಪಿ ಪದಾಧಿಕಾರಿಗಳಿಗೆ ಚುನಾವಣೆಗೆ ಸಜ್ಜಾಗಲು ಕಾರ್ಯಕ್ರಮ ರೂಪಿಸಲಾಗುವುದು ಎಂದರು. ಜನರಲ್ಲಿ ಬಹಳಷ್ಟು ಉತ್ಸಾಹ ಇದೆ. ದಿನಕ್ಕೆ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ಮಾಡುವ ಉದ್ದೇಶ ಇದ್ದರೂ ಜನರ ಬೇಡಿಕೆ ಹೆಚ್ಚಿದೆ. ಜನರ ವಿಶ್ವಾಸ ಗಳಿಸಿ ಮತ್ತೊಮ್ಮೆ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.

ಭಾರತ್ ಜೋಡೋ ಯಾತ್ರೆ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ. ಜೋಡೋ ಯಾತ್ರೆ ಯಾರನ್ನು ಜೋಡಿಸುತ್ತಿದೆ, ಯಾರನ್ನು ಒಡೆಯುತ್ತಿದೆ ಎಂದು ಜಗತ್ತಿಗೆ ತಿಳಿದಿದೆ. ಅದಕ್ಕೆ ಯಾವ ಮಹತ್ವವೂ ಉಳಿದಿಲ್ಲ. ನಮ್ಮ ಕೆಲಸ, ನಮ್ಮ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕೂ ಜನಸಂಕಲ್ಪ ಯಾತ್ರೆಗೂ ಸಂಬಂಧವಿಲ್ಲ ಎಂದರು.

RELATED TOPICS:
English summary :The world knows who Bharat Jodo binds and who breaks it: CM

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...