ಉದ್ದೇಶ ಪೂರಕವಾಗಿಯೇ ಟಿಪ್ಪು ಎಕ್ಸ್ಪ್ರೆಸ್ ಹೆಸರು ಬದಲಾಯಿಸಿದ್ದೇನೆ: ಪ್ರತಾಪ್ ಸಿಂಹ | JANATA NEWS
ಮೈಸೂರು : ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ ಒಡೆಯರ್ ಎಕ್ಸಪ್ರೆಸ್ ಎಂದು ಕೇಂದ್ರ ಸರ್ಕಾರ ಮರುನಾಮಕರಣ ಮಾಡಿದೆ.
ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಮಹಾರಾಜರು ಮೈಸೂರಿಗೆ ಕೊಟ್ಟ ಕೊಡುಗೆಗಳನ್ನು ನಾನು ಹೇಳುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸದ್ದಾರೆ.
ಟಿಪ್ಪುಗೆ ಮೈಸೂರಿಗೆ ಏನು ಸಂಬಂಧ? ಟಿಪ್ಪು ಏನು ಮೈಸೂರಿನವನೇ? ಅವನು ಶ್ರೀರಂಗಪಟ್ಟಣದವನು. ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಒಂದು ಟ್ರೈನ್ ಗೆ ಇಟ್ಟ ಹೆಸರನ್ನ ಬದಲಾಯಿಸಿದ ಉದಾಹರಣೆಗಳೇ ಇಲ್ಲ.ಆದರೆ ಇದನ್ನ ಉದ್ದೇಶ ಪೂರ್ವಕವಾಗಿಯೇ ಪ್ರಯತ್ನ ಪಟ್ಟು ಬದಲಾಯಿಸಿದ್ದೇನೆ ಎಂದರು.
ಸಿದ್ದರಾಮಯ್ಯ ಓದಿದ ವಿಶ್ವವಿದ್ಯಾನಿಲಯ ಮೈಸೂರು ಮಹಾರಾಜರು ಕಟ್ಟಿಸಿದ್ದು. ಸಿದ್ದರಾಮಯ್ಯ ಮಹಾರಾಜರ ಬಗ್ಗೆ ಉಢಾಫೆಯಿಂದ ಮಾತನಾಡುತ್ತಾರೆ. ಮೈಸೂರು ಮಹಾರಾಜರ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯನವರಿಂದ ನಾವು ಪಾಠ ಕಲಿಯುವ ಅಗತ್ಯವಿಲ್ಲ ಎಂದರು. ಟಿಪ್ಪು ಹೆಸರನ್ನ ಜನರ ಮನಸ್ಸಿನಿಂದ ತೆಗೆಯಲು ಆಗಲ್ಲ ಎನ್ನುವವರ ಹೆಸರನೇ ಜನ ಮರೆಯುತ್ತಿದ್ದಾರೆ. ಅದಕ್ಕೆ ಉದಾಹರಣೆ ಕೂಡ ಇದೆ.
ಒಂದು ಬಾರಿ ರೈಲಿಗೆ ಇಟ್ಟ ಹೆಸರನ್ನು ಬದಲಾಯಿಸಿದ ಉದಾಹರಣೆಗಳೇ ಇಲ್ಲಾ. ಆದರೆ ನಾನು ಉದ್ಧೇಶಪೂರ್ವಕವಾಗಿಯೇ ಪ್ರಯತ್ನ ಪಟ್ಟು ಒಡೆಯರ್ ಎಕ್ಸ್ಪ್ರೆಸ್ ಎಂದು ಹೆಸರು ಬದಲಾಯಿಸಿದ್ದೇನೆ. ನಾನು ಮೈಸೂರಿಗೆ ಹತ್ತು ರೈಲು ತಂದಿದ್ದೇನೆ. ಈ ದೇಶದ ಯಾವುದೇ ಸಂಸದ 10 ವರ್ಷದಲ್ಲಿ ಮಾಡದ ಸಾಧನೆಯನ್ನ ನಾನು ಮಾಡಿದ್ದೇನೆ ಎಂದು ಹೇಳಿದರು.