ಕಬ್ಬಿನ ಗದ್ದೆಗೆ ನುಗ್ಗಿದ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್! | JANATA NEWS
ಬೆಳಗಾವಿ : ಕೆಎಸ್ಆರ್ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ನಡೆದಿದೆ.
ಸರ್ಕಾರಿ ಬಸ್ ಸೋಮಾಪುರ ಗ್ರಾಮದಿಂದ ತಲ್ಲೂರ ಗ್ರಾಮಕ್ಕೆ ಹೊರಟ್ಟಿದ್ದ ವೇಳೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ನ ಬ್ರೇಕ್ ಫೇಲ್ ಆಗಿ, ರಸ್ತೆ ಪಕ್ಕ ನಿಲ್ಲಿಸಿದ್ದ ಬೈಕ್ಗೆ ಡಿಕ್ಕಿ ಹೊಡೆದು ಬಸ್ ತಾಲ್ಲೂರು ಗ್ರಾಮದ ಪಕಾಲಿ ಎಂಬುವವರ ಕಬ್ಬಿನ ಗದ್ದೆಗೆ ಬಸ್ ನುಗ್ಗಿದೆ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ.
ಚಾಲಕ ಸೇರಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳೀಯರು ಗಾಯಾಳುಗಳನ್ನು ಯರಗಟ್ಟಿ ತಾಲೂಕು ಆಸ್ಪತ್ರಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಮುರಗೋಡ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.