ಯುವತಿಯ ಅನುಮಾನಾಸ್ಪದ ಸಾವು: ಅತ್ಯಾಚಾರ-ಕೊಲೆ ಶಂಕೆ | JANATA NEWS
ಬೆಳಗಾವಿ : ಚಿಕಿತ್ಸೆ ಫಲಿಸದೇ ಯುವತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯಲ್ಲಿ ನಡೆದಿದೆ.. ಇದೀಗ ಕುಟುಂಬಸ್ಥರು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ(19) ಮೃತ ಯುವತಿ.
ಒಂದು ತಿಂಗಳ ಹಿಂದೆ ತಬಸ್ಸುಮ್ ಬೆಂಗಳೂರಿನ ಕಾಲ್ ಸೆಂಟರ್ ಗೆ ಕೆಲಸಕ್ಕೆ ಸೇರಿದ್ದರು. ಆದರೆ ಬುಧವಾರ ಅಪರಿಚಿತ ಯುವಕನೋರ್ವ ತಬಸ್ಸುಮ್ ಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದ. ಬಳಿಕ ಯುವತಿಯ ಮೊಬೈಲ್ ನೊಂದಿಗೆ ಎಸ್ಕೇಪ್ ಆಗಿದ್ದಾನೆ.
ಪೋಷಕರು ಆಸ್ಪತ್ರೆಗೆ ಬಂದಾಗ ತಬಸ್ಸುಮ್ ನಿತ್ರಾಣ ಸ್ಥಿತಿಯಲ್ಲಿದ್ದಳು. ಯುವತಿಯ ತಲೆಯ ಹಿಂಬದಿಯಲ್ಲಿ, ಮೈಮೇಲೆ ಸಿಗರೇಟ್ನಿಂದ ಸುಟ್ಟಿದ ಗಾಯದ ಗುರುತು ಪತ್ತೆಯಾಗಿವೆ. ಹೆಚ್ಚಿನ ಚಿಕಿತ್ಸೆಗೆ ಮಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ತಬಸ್ಸುಮ್ ಸಾವನ್ನಪ್ಪಿದ್ದಾಳೆ.
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಸಿಬಿಐ ತನಿಖೆ ನಡೆಸಬೇಕು, ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.