ಟ್ಯೂಷನ್ ಗೆ ಹೋಗಿದ್ದ ಬಾಲಕಿ ಶವ ಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ | JANATA NEWS
ಮಂಡ್ಯ : ಟ್ಯೂಷನ್ಗೆ ಹೋಗಿದ್ದ ದಿವ್ಯಾ ಎಂಬ ಬಾಲಕಿ ನೀರಿನ ಸಂಪಿನಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೋಷಕರು ದೂರು ನೀಡಿದ ಹಿನ್ನಲೆ ಪೊಲೀಸರು ಬಾಲಕಿಗಾಗಿ ಹುಡುಕಾಟ ನಡೆಸಿದ್ದರು. ಟ್ಯೂಷನ್ ಶಿಕ್ಷಕನೇ 10 ವರ್ಷದ ವಿದ್ಯಾರ್ಥಿಯನ್ನು ಕೊಲೆ ಮಾಡಿ ಶವವನ್ನು ನಿರ್ಮಾಣ ಹಂತದ ಕಟ್ಟದ ನೀರಿನ ಸಂಪ್ನಲ್ಲಿ ಹಾಕಿದ್ದ ಎನ್ನುವುದನ್ನು ಪೊಲೀಸರ ಬಳಿ ಸತ್ಯ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಬಾಲಕಿ ದಿವ್ಯಾ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಟ್ಯೂಷನ್ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಕಾಂತರಾಜ್ ಎಂಬ ಶಿಕ್ಷಕ ವಿದ್ಯಾರ್ಥಿ ದಿವ್ಯಾಳನ್ನ ಟ್ಯೂಷನ್ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
English summary :A big twist in the case of finding the body of a girl who had gone to tuition