ಬೆಂಗಳೂರಲ್ಲಿ ಇಂದಿನಿಂದ ತಡರಾತ್ರಿ 1 ಗಂಟೆವರೆಗೂ ಹೋಟೆಲ್ ಓಪನ್: ಕಮಿಷನರ್ ಪ್ರತಾಪ್ ರೆಡ್ಡಿ | JANATA NEWS
ಬೆಂಗಳೂರು : ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ತಿಂಡಿ-ತಿನಿಸು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಕಮಿಷನರ್ ಪ್ರತಾಪ್ ರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಹೋಟೆಲ್ಗಳನ್ನು ತೆರೆಯಲು ಅನುಮತಿ ನೀಡಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. 1 ಗಂಟೆವರೆಗೆ ವ್ಯಾಪಾರ ನಡೆಸಲು ಅನುಮತಿ ಇದ್ದರೂ ಪೊಲೀಸರು ರಾತ್ರಿ 10 ಗಂಟೆಗೆಲ್ಲ ಹೋಟೆಲ್ಗಳನ್ನು ಬಂದ್ ಮಾಡಿಸುತ್ತಿದ್ದರು.
ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ ತಿನಿಸುಗಳನ್ನು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಗ್ಗೆ 6 ರಿಂದ ರಾತ್ರಿ 1 ಗಂಟೆವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಪ್ರತಾಪ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ತಿಳಿಸಿ ಹೋಟೆಲ್ಗಳಿಗೆ ತೊಂದರೆ ನೀಡದಂತೆ ನೋಡಿಕೊಳ್ಳುವಂತೆ ಡಿಸಿಪಿಗಳಿಗೆ ಆಯುಕ್ತರು ಸೂಚಿಸಿದ್ದಾರೆ.
ಕೆಲವು ಕಡೆ ಠಾಣಾ ವ್ಯಾಪ್ತಿಯಲ್ಲಿ ಒಂದೊಂದು ಟೈಮ್ ಇದೆ ಅನ್ನೋ ಆರೋಪ ಇದೆ. ಕೆಲವು ಕಡೆ 11 ಗಂಟೆ, 12 ಗಂಟೆಗೆ ಮುಚ್ಚಿಸ್ತಾರೆ ಅನ್ನೋ ಆರೋಪ ಇದೆ. ಅದ್ರಿಂದ ರಾತ್ರಿ ವೇಳೆ ಒಂದು ಗಂಟೆಯವರೆಗೆ ಓಪನ್ ಮಾಡಲು ಆದೇಶ ಹೊರಡಿಸಲಾಗಿದೆ. ವಿಶೇಷ ಸಂದರ್ಭದಲ್ಲಿ ಬಾರ್ ರೆಸ್ಟೋರೆಂಟ್ ಮುಚ್ಚಲು ಆದೇಶ ಇರುತ್ತೆ. ಹೋಟೆಲ್, ಬಾರ್ ರೆಸ್ಟೋರೆಂಟ್ ಗಳು ಸಹ ಒಂದು ಗಂಟೆಯವರೆಗೆ ತೆರೆಯಲು ಅವಕಾಶ ಇದೆ.