ಮಳಲಿ ಮಸೀದಿ ವಿವಾದ: ನ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ | JANATA NEWS
ಮಂಗಳೂರು : ಮಳಲಿ ಮಸೀದಿ ವಿವಾದ ಕುರಿತಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ತೀರ್ಪನ್ನು ನವೆಂಬರ್ 9ಕ್ಕೆ ಕಾಯ್ದಿರಿಸಿದೆ.
ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.
ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಆಕ್ಷೇಪಿಸಿದ್ದ ಮಸೀದಿ ಮಂಡಳಿ, ಇಂಥ ಆದೇಶ ಮಾಡಲು ವಿಚಾರಣಾ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಕೋರಿತ್ತು. ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯವು ಸೋಮವಾರ ತೀರ್ಪನ್ನು ನೀಡಬೇಕಿತ್ತು , ಅದರೆ ತೀರ್ಪು ಕಾಯ್ದಿರಿಸಿದ್ದು, ನವೆಂಬರ್ 9ಕ್ಕೆ ಮುಂದೂಡಿದೆ.
ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಹಿಂದೂ ಶೈಲಿಯ ಮರದ ಕೆತ್ತನೆ ಪತ್ತೆ ಆಗಿತ್ತು. ಹಿಂದೂ ಶೈಲಿಯ ಮರದ ಕೆತ್ತನೆಯ ಮಸೀದಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು