Sun,Oct26,2025
ಕನ್ನಡ / English

ಮರ್ಯಾದಾ ಹತ್ಯೆ: ಪ್ರೇಮಿಗಳನ್ನ ಒಂದು ಮಾಡ್ತೀವಿ ಎಂದು ಕರೆದು ಹತ್ಯೆ | JANATA NEWS

18 Oct 2022

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ಮರ್ಯಾದಾ ಹತ್ಯೆ ಬೆಳಕಿಗೆ ಬಂದಿದೆ. ಯುವತಿಯ ತಂದೆ ಹಾಗೂ ಮಾವಂದಿರು ಪ್ರೇಮಿಗಳಿಬ್ಬರನ್ನು ಕೊಲೆಗೈದು ಕೃಷ್ಣಾ ನದಿಗೆ ಎಸೆದಿದ್ದಾರೆ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಇಬ್ಬರ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಗ್ರಾಮದ ವಿಶ್ವನಾಥ್ ನೆಲಗಿ(24) ಹಾಗೂ ರಾಜೇಶ್ವರಿ(18) ಹತ್ಯೆಯಾದ ಪ್ರೇಮಿಗಳು. ಸುಮಾರು 4-5 ವರ್ಷಗಳಿಂದ ವಿಶ್ವನಾಥ್ ಹಾಗೂ ರಾಜೇಶ್ವರಿ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

ಈ ವಿಚಾರ ತಿಳಿದ ರಾಜೇಶ್ವರಿ ಪೋಷಕರು, ಅಪ್ರಾಪ್ತ ಮಗಳ ಪ್ರೀತಿಗೆ ಅಡ್ಡಿಪಡಿಸಿ ಬುದ್ಧಿ ಮಾತು ಹೇಳಿದ್ದರು. ವಿಶ್ವನಾಥ್‌ನ ಮನೆಯವರು ಆತನನ್ನು ಕೂಲಿ ಕೆಲಸಕ್ಕೆಂದು ಕೇರಳದ ಕಾಸರಗೋಡಿಗೆ ಕಳುಹಿಸಿದ್ದರು.

ಆದರೆ ರಾಜೇಶ್ವರಿಯ ತಂದೆ ಪರಸಪ್ಪ ಕರಡಿ ಇಬ್ಬರನ್ನೂ ಒಂದು ಮಾಡಿಸುವುದಾಗಿ ನಂಬಿಸಿ, ವಿಶ್ವನಾಥ್‌ನನ್ನು ಊರಿಗೆ ಬರುವಂತೆ ಹೇಳಿದ್ದಾರೆ. ನರಗುಂದ ಬಳಿ ಇದ್ದ ವಿಶ್ವನಾಥನನ್ನು ನಂಬಿಸಿ ರಾಜೇಶ್ವರಿ, ನಿನ್ನನ್ನು ಒಂದು ಮಾಡೋದಾಗಿ ಬೇವಿನಮಟ್ಟಿ ಗ್ರಾಮದಿಂದ ಕರೆದೊಯ್ದಿದ್ದರಂತೆ. ಇತ್ತ ಬಾಲಕಿಯನ್ನು ಕರೆತಂದಿದ್ದ ಆರೋಪಿಗಳು ರಾಜೇಶ್ವರಿ ಕತ್ತನ್ನು ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದರಂತೆ. ಇತ್ತ ವಿಶ್ವನಾಥನ ಮರ್ಮಾಂಗ ಹಾಗೂ ಎದೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದರಂತೆ.

ಅಲ್ಲಿಂದ ಇಬ್ಬರ ಮೃತ ದೇಹಗಳನ್ನು ಕ್ರೂಸರ್ ವಾಹನದಲ್ಲಿ ಕೊಂಡೊಯ್ದಿದ್ದಾರೆ. ಶವಗಳನ್ನು ಹುನಗುಂದ ಎನ್‌ಹೆಚ್ 50ಯ ಕೃಷ್ಣಾ ನದಿ ಬ್ರಿಡ್ಜ್ ಮೇಲೆ ಕೊಂಡೊಯ್ದು, ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಶವಗಳ ಮೇಲಿನ ಬಟ್ಟೆ ಬಿಚ್ಚಿ, ಹರಿಯುತ್ತಿದ್ದ ಕೃಷ್ಣಾ ನದಿಗೆ ಎಸೆದಿದ್ದಾರೆ. ನಂತರ ಅವರಿಬ್ಬರ ಬಟ್ಟೆಗಳನ್ನು ಸಂಗಮ ಕ್ರಾಸ್ ಬಳಿ ತಂದು ಸುಟ್ಟು ಹಾಕಿದ್ದಾರೆ.

ವಿಚಾರಣೆಗೆ ಸಂದರ್ಭದಲ್ಲಿ ಅನುಮಾನಗೊಂಡ ಪೊಲೀಸರು, ಶಂಕೆಯ ಮೇರೆಗೆ ಅಕ್ಟೋಬರ್ 15 ರಂದು ಯುವತಿಯ ಸಹೋದರ ರವಿ ಹುಲ್ಲಣ್ಣವರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ಯುವತಿ ತಂದೆ ಪರಸಪ್ಪ ಕರಡಿ ಕುಮ್ಮಕ್ಕಿನಿಂದಲೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ. ಪ್ರಕರಣದ ಸಂಬಂಧ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು, ರಾಜೇಶ್ವರಿ ಕರಡಿ (17) ವಿಶ್ವನಾಥ ನೆಲಗಿ (22) ಕೊಲೆಯಾದ ಪ್ರೇಮಿಗಳು. ಪ್ರಕರಣದಲ್ಲಿ ರಾಜೇಶ್ವರಿ ಅಣ್ಣ ರವಿ ಹುಲ್ಲಣ್ಣವರ (19), ಮಾವಂದಿರರಾದ ಹನುಮಂತ ಮಲ್ನಾಡದ (22), ಬೀರಪ್ಪ ದಳವಾಯಿ (18) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Honor killing: Killing of lovers by calling them

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...