Sun,Mar22,2026
ಕನ್ನಡ / English

ಮಹಿಳೆಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಸೋಮಣ್ಣ | JANATA NEWS

23 Oct 2022

ಚಾಮರಾಜನಗರ : ಮಹಿಳೆಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಕ್ಷಮೆ ಯಾಚಿಸಿದ್ದಾರೆ.

45 ವರ್ಷ ಹಲವು ಏಳುಬೀಳು ಕಂಡಿದ್ದೇನೆ. ನಿನ್ನೆಯ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ. ಪ್ರಾಯಶಃ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ, ವಿಷಾದ ವ್ಯಕ್ತಪಡಿಸುತ್ತೇನೆ. ನಿನ್ನೆಯ ಘಟನೆ ಘಟನೆಯೇ ಅಲ್ಲ ಎಂದು ಹೇಳಿದರು.

ನಿನ್ನೆ ನಡೆದ ಘಟನೆ ಘಟನೆಯೇ ಅಲ್ಲ. ಆ ಹೆಣ್ಣು ಮಗಳು ಪದೇ ಪದೇ ವೇದಿಕೆ ಮೇಲೆ ಬರ್ತಾ ಇದ್ದಳು, ತಾಯಿ ಎಷ್ಟು ಸಾರಿ ಬರ್ತೀಯಾ ಅಂತ ವಿಚಾರಿಸಿದೆ. ನಿನ್ನ ಸಮಸ್ಯೆ ಬಗೆಹರಿಸ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ. ಅಷ್ಟೇ ವಿನಃ ನನಗೆ ಆಕೆಯನ್ನು ಹೊಡೆಯಬೇಕು ಎನ್ನುವ ಉದ್ದೇಶ ಇರಲಿಲ್ಲ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ.

ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಕೂಡ ಬಡತನದಿಂದಲೇ ಬಂದವನು. ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ತಿಳಿಸಿದರು.

ಮಹಿಳೆಗೆ ಒತ್ತಡ ಹೇರಿ ಹೇಳಿಕೆ ಕೊಡಿಸಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೋಮಣ್ಣ, ಅದರ ಅವಶ್ಯಕತೆ ನನಗೆ ಇಲ್ಲ. ಆ ರೀತಿ ಜೀವನ ಮಾಡಿಲ್ಲ. ಈ ಸೋಮಣ್ಣ ಯಾವತ್ತು ಕ್ಷುಲ್ಲಕ ಕೆಲಸ ಮಾಡಿಲ್ಲ. ಸೋಮಣ್ಣ ಸೋಮಣ್ಣ ಆಗಿಯೇ ಇದ್ದೇನೆ ಎಂದರು.

ಸಂಸ್ಕಾರಯುತವಾಗಿ ಜೀವನ ಮಾಡಿದ್ದೇನೆ. ನನಗೆ ಹೆಣ್ಣು ಮಕ್ಕಳು ತಾಯಿಂದಿರ ಸಮಾನ. ಇಷ್ಟೊಂದು ಜನ ನನ್ನ ಕಾರ್ಯ ವೈಖರಿಯನ್ನು ವಿರೋಧಿಸ್ತಾರೆ ಅಂತ ದೇವರಾಣೆಗೂ ಗೊತ್ತಿರಲಿಲ್ಲ. ನನ್ನ ಪತ್ನಿ ಬಿಟ್ಟರೆ ಉಳಿದ ಹೆಣ್ಣು ಮಕ್ಕಳೆಲ್ಲಾ ಸಹೋದರಿಯರು, ತಾಯಿಂದಿರ ಸಮಾನ. ನನ್ನಿಂದ ಯಾರಿಗಾದರು ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೀನಿ ಎಂದು ಎರಡೆರಡು ಬಾರಿ ಸಚಿವರು ಕ್ಷಮೆ ಕೇಳಿದ್ದಾರೆ.

RELATED TOPICS:
English summary :Woman slapped case: Somanna apologizes

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...