3 ವರ್ಷದ ನಂತರ ಜೆಡಿಎಸ್ ಕಚೇರಿಗೆ ಜಿಟಿಡಿ ಭೇಟಿ, ಸಿಹಿ ತಿನ್ನಿಸಿ ಸ್ವಾಗತಿಸಿದ ಹೆಚ್ಡಿಕೆ | JANATA NEWS
ಬೆಂಗಳೂರು : ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಮೂರೂವರೆ ವರ್ಷಗಳ ಬಳಿಕ ಪಕ್ಷದ ಕಚೇರಿಗೆ ಆಗಮಿಸಿದರು. ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಿಹಿ ತಿನ್ನಿಸಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ಜತೆ ಮುನಿಸಿಕೊಂಡು ದೂರವೇ ಉಳಿದಿದ್ದ ಜಿಟಿಡಿ, ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಿಹಿ ತಿನ್ನಿಸಿ ದೀಪಾವಳಿ ಶುಭಾಶಯ ಕೋರಿದರು. ಬಳಿಕ ಒಂದು ಗಂಟೆಗೂ ಹೆಚ್ಚು ಕಾಲ ಪ್ರಸಕ್ತ ರಾಜಕಾರಣ, ಪಂಚರತ್ನ ರಥಯಾತ್ರೆ ಬಗ್ಗೆ ಚರ್ಚಿಸಿದರು.
ಕುಮಾರಸ್ವಾಮಿ ಜೊತೆ ಮಾತುಕತೆ ಬಳಿಕ ಮಾತನಾಡಿದ ಜಿ.ಟಿ ದೇವೇಗೌಡ, ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿದ್ದೇನೆ. ಮಳೆ ಬಂದು ನಾಲೆ, ಸೇತುವೆ, ರಸ್ತೆ ಎಲ್ಲವೂ ಹಾಳಾಗಿದೆ. ಇದೆಲ್ಲವನ್ನೂ ಅಭಿವೃದ್ಧಿ ಪಡಿಸುವ ಶಕ್ತಿ ದೇವರು ಕೊಡಲಿ ಎಂದು ಸಿಎಂಗೆ ಶುಭ ಕೋರಿದ್ದೇನೆ ಎಂದು ತಿಳಿಸಿದರು.