Sun,May19,2024
ಕನ್ನಡ / English

ಸಿದ್ದರಾಮಯ್ಯಗೆ ಧಮ್ ಇದ್ದರೆ ಬಾದಾಮಿಯಿಂದ ಸ್ಪರ್ಧೆ ಮಾಡಲಿ, ಇಲ್ಲವೆ ಚಾಮುಂಡಿ ಕ್ಷೇತ್ರಕ್ಕೆ ಬಂದು ನೋಡಲಿ | JANATA NEWS

31 Oct 2022
2061

ಬೆಂಗಳೂರು : ಧಮ್ ಇದ್ದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಯಿಂದ ಸ್ಫರ್ಧೆ ಮಾಡಲಿ; ಇಲ್ಲವೆ ಚಾಮುಂಡಿ ಕ್ಷೇತ್ರಕ್ಕೆ ಬಂದು ನೋಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಸವಾಲು ಹಾಕಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿಎಂ ಆದವರಿಗೆ ಅವರ ಕ್ಷೇತ್ರದಲ್ಲಿ ನಿಲ್ಲಲು ಯೋಗ್ಯತೆ ಇಲ್ಲವೆಂದಾದರೆ ಅವರಿಗೆ ಬೇರೆಯವರ ಬಗ್ಗೆ ಮಾತನಾಡೋ ಹಕ್ಕೇನಿದೆ, ನೈತಿಕತೆ ಇದೆಯಾ..? ಕ್ಷೇತ್ರ ಹುಡುಕುವ ದುಸ್ಥಿತಿ ಇವರಿಗೆ ಬಂದಿದೆ. ಮೋದಿಯವರ ಬಗ್ಗೆ ಏಕವಚನದಲ್ಲಿ ಮಾತನಾಡ್ತಾರೆ. ಮೋದಿ ಹೋದಲ್ಲಿ ಗೆಲ್ತಾರೆ, ಸಿದ್ರಾಮಣ್ಣ, ರಾಹುಲ್ ಹೋದಲ್ಲೆಲ್ಲಾ ಸೋಲ್ತಾರೆ. ಸಿದ್ದು ಚಾಮುಂಡಿ, ಬಾದಾಮಿ ಆಯ್ತು ಈಗ ಕೋಲಾರ ಕಡೆ ನೋಡ್ತಿದ್ದಾರೆ ಎಂದರು.

ಮೋದಿಯವರ ಬಗ್ಗೆ ಏಕವಚನದಲ್ಲಿ ಮಾತನಾಡ್ತಾರೆ. ಮೋದಿ ಹೋದಲ್ಲಿ ಗೆಲ್ತಾರೆ, ಸಿದ್ರಾಮಣ್ಣ, ರಾಹುಲ್ ಹೋದಲ್ಲೆಲ್ಲಾ ಸೋಲ್ತಾರೆ. ಸಿದ್ದು ಚಾಮುಂಡಿ, ಬಾದಾಮಿ ಆಯ್ತು ಈಗ ಕೋಲಾರ ಕಡೆ ನೋಡ್ತಿದ್ದಾರೆ. ಅವರಿಗೆ ಸ್ಥಿರ ಕ್ಷೇತ್ರವಿಲ್ಲ. ಸಿದ್ದರಾಮಯ್ಯ ಒಬ್ಬ ರಾಜಕೀಯ ಮುತ್ಸದ್ದಿ ಅಂತಾದರೆ ಎದೆ ತಟ್ಟಿ ಹೇಳಬೇಕು. ಕಾಂಗ್ರೆಸ್ ಕಡಿಮೆ ಅಂತರದಿಂದ ಗೆಲ್ಲುವ ಕ್ಷೇತ್ರದಿಂದ ಗೆಲ್ತೇನೆ ಅಂತ ಹೇಳಬೇಕು ಎಂದರು.

ಮೋದಿ ಅವರು ಬಿಜೆಪಿ ವೀಕ್ ಪ್ಲೇಸ್ ವಾರಣಾಸಿಗೆ ಹೋಗಿ ಅತಿಹೆಚ್ಚು ವೋಟ್‌ ಗಳಿಸಿದ್ರು. ಯಡಿಯೂರಪ್ಪನವರು ನಿರಂತರವಾಗಿ ಶಿಕಾರಿಪುರದಿಂದಲೇ ಗೆದ್ರು. ಒಂದು ದಿನ ಕ್ಷೇತ್ರ ಬಿಡಲಿಲ್ಲ. ಇದು ಯಡಿಯೂರಪ್ಪ ತಾಕತ್. ಕ್ಷೇತ್ರ ಹುಡುಕುವ ನಾಯಕರಿಂದ ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿದೆ. ಇಷ್ಟಿದ್ದರೂ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಸಿದ್ದು ಮುಂದಾಗಿ ಪೈಪೋಟಿ ನಡೆಸಿರೋದು ನಾಟಕ, ಹಾಸ್ಯ. ಕಾಂಗ್ರೆಸ್ ನಲ್ಲಿ ಈಗ ಗೊಂದಲ ಶುರುವಾಗಿದೆ, ಬಿಜೆಪಿಯಲ್ಲಿ ಗೊಂದಲ ಇಲ್ಲ ಎಂದರು.

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್​ ಖಂಡಿತ ಟಿಕೆಟ್ ನೀಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಅವರನ್ನು ಗೆಲ್ಲಲು ಬಿಡುವುದಿಲ್ಲ. ಸಿದ್ದರಾಮಯ್ಯ, ಖರ್ಗೆ ಹಾಗೂ ಪರಮೇಶ್ವರ್ ಅವರಿಗೆ ದ್ರೋಹ ಮಾಡಿದ್ದು ಖರ್ಗೆ ಮನಸ್ಸಿನಲ್ಲಿ ಇನ್ನೂ ಇದೆ. ಹೀಗಾಗಿ ಈ ಭಾರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸುವುದು ಖಂಡಿತ.

ಸಿದ್ದರಾಮಯ್ಯ ರಾಜ್ಯದ ರಾಜಕೀಯದ ಖಳನಾಯಕ. ಇವರು ಯಾರನ್ನೂ ಬದುಕಲು ಬಿಡುವುದಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಸೇರಲು ದೇವೇಗೌಡರನ್ನು ತುಳಿದು, ಜೆಡಿಎಸ್​ನಿಂದ ಹೊರಬಂದರು. ಇಂದಿರಾಗಾಂಧಿಯನ್ನು ಕೆಟ್ಟ ಶಬ್ದಗಳಿಂದ ಬೈದವರು, ಸೋನಿಯಾಗಾಂಧಿ ಕಾಲು ಹಿಡಿದು, ಭಿಕ್ಷೆ ಬೇಡಿ ಸಿಎಂ‌ ಆದರು ಎಂದು ಟೀಕಿಸಿದರು.

RELATED TOPICS:
English summary :If Siddaramaiah has Dham, let him contest with almonds

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...