ಇ.ಡಿ ಯವರು ಪದೇ ಪದೇ ಯಾಕೆ ಕರೆದು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ | JANATA NEWS
ಬೆಂಗಳೂರು : ಇ.ಡಿ ಯವರು ಪದೇ ಪದೇ ಯಾಕೆ ಕರೆದು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.
ಈ ಹಿಂದೆ ನೋಟಿಸ್ ಕೊಟ್ಟಾಗ ದೆಹಲಿಗೆ ಹೋಗಿ ಉತ್ತರ ಕೊಟ್ಟು ಬಂದಿದ್ದೇನೆ. ಈಗ ತನಿಖಾಧಿಕಾರಿ ಬದಲಾವಣೆ ಆಗಿದ್ದಾರಂತೆ. ಈ ಕಾರಣಕ್ಕಾಗಿ ನನಗೆ ಮತ್ತು ನನ್ನ ಸಹೋದರನಿಗೆ ನೋಟಿಸ್ ಬಂದಿದೆ ಎಂದರು.
ಮೊದಲು ಕೆಲವು ದಾಖಲಾತಿಗಳನ್ನು ಕೇಳಿದ್ದರು. ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ ಎಂದರು.