ಆಟವಾಡಲು ತೆರಳಿದ್ದ ಬಾಲಕರಿಬ್ಬರು ನೀರುಪಾಲು | JANATA NEWS
ಉತ್ತರ ಕನ್ನಡ : ಶಾಲೆ ಮುಗಿದ ಬಳಿಕ ಆಟವಾಡಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೊರವಲಯದಲ್ಲಿರುವ ಎಸಳೆ ಕೆರೆ ಬಳಿ ನಡೆದಿದೆ.
ಕಸ್ತೂರಬಾ ನಗರದ ಅಹ್ಮದ್ ರಜಾಕ್ ಜನ್ನಿಗೇರಿ (14), ಇಮಾಮ್ ಖಾಸಿಮ್ ರಿಯಾಜ್ ಪಾಳಾ (14) ಮೃತ ಬಾಲಕರು. ಇವರು ಸಮೀಪದ ಕಸ್ತೂರಬಾ ಶಾಲೆಯಲ್ಲಿ ಓದುತ್ತಿದ್ದರು. ಶಾಲೆ ಮುಗಿಸಿ ಬಂದ ನಂತರ ನಾಲ್ವರು ಬಾಲಕರು ಕೆರೆ ಬಳಿ ಆಟವಾಡಲು ತೆರಳಿದ್ದರು.
ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
RELATED TOPICS:
English summary :The two boys who had gone to play, fell into the water