Sat,Jun20,2026
ಕನ್ನಡ / English

ಮತ್ತೆ ಹೆಣ್ಣು ಮಗು ಹುಟ್ಟಿತೆಂದು ಮನನೊಂದು ಆತ್ಮಹತ್ಯೆಗೆ ಶರಣಾದ ತಂದೆ | JANATA NEWS

06 Nov 2022

ಕೋಲಾರ : ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶೆಟ್ಟಿಹಳ್ಳಿ ಗ್ರಾಮದಲ್ಲಿ ಡ್ರೈವರ್​ ಕೆಲಸ ಮಾಡಿಕೊಂಡಿದ್ದ ಲೋಕೇಶ್​ಗೆ ಕಳೆದ ಎಂಟು ವರ್ಷಗಳ ಹಿಂದೆ ಆಂಧ್ರ ಪ್ರದೇಶ ಪುಂಗನೂರಿನ ಸಿರಿಶ ಎನ್ನುವವರೊಂದಿಗೆ ಮದುವೆ ಮಾಡಲಾಗಿತ್ತು. ಇದಾದ ನಂತರ ಲೋಕೇಶ್​ಗೆ ಎರಡು ವರ್ಷಗಳ ಅಂತರದಲ್ಲಿ ಮೂರು ಜನ ಹಣ್ಣುಮಕ್ಕಳಾಗಿವೆ.

ಲೋಕೇಶ್​​ ನಾಲ್ಕನೇ ಬಾರಿ ಆದ್ರು ಗಂಡು ಮಗು ಜನಿಸುತ್ತದೆ ಎಂದು ಆಸೆ ಹೊಂದಿದ್ದರಂತೆ. ಆದರೆ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಲೋಕೇಶ್​ ಮನನೊಂದಿದ್ದರು ಎನ್ನಲಾಗಿದೆ.

ಕೆಲವರು ಅದೇ ವಿಚಾರವಾಗಿ ಲೋಕೇಶ್​ ಮನಸ್ಸಿಗೆ ನೋವಾಗುವಂತೆ ಮಾತನಾಡಿದ್ದರಂತೆ ಎನ್ನಲಾಗಿದೆ. ಇದರಿಂದ ಲೋಕೇಶ್ ತಮ್ಮ ಪತ್ನಿಗೆ ನಾಟಿ ಔಷದವನ್ನೂ ಸಹ ಕೊಡಿಸಿದ್ದರಂತೆ.

ಹೀಗಿರುವಾಗಲೇ ನವೆಂಬರ್​ 4 ರಂದು ಲೋಕೇಶ್ ಪತ್ನಿಗೆ ಸಿರಿಶಗೆ ನಾಲ್ಕನೇ ಮಗುವಾಗಿದ್ದು, ಅದೂ ಕೂಡಾ ಹೆಣ್ಣುಮಗುವಾಗಿದೆ. ವಿಷಯ ತಿಳಿದು ಕಣ್ಣೀರು ಹಾಕಿ ತೀವ್ರವಾಗಿ ನೊಂದಿದ್ದ ಲೋಕೇಶ್ ನಿನ್ನೆ ರಾತ್ರಿ ಮನೆಯಲ್ಲಿ ಒಂಟಿಯಾಗಿ ಮಲಗಿದ್ದಾನೆ.

ರಾತ್ರಿ ತಮ್ಮ ಮನೆಯಲ್ಲಿ‌ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂದಿನಂತೆ ಲೋಕೇಶ್​ ತಾಯಿ ಮನೆಗೆ ಬಂದು ನೋಡಿದ್ದು, ಲೋಕೇಶ್​ ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿದೆ. ಪತ್ನಿ ಹಾಗೂ ಮಕ್ಕಳ ರೋಧನೆ ಮುಗಿಲು ಮುಟ್ಟಿದೆ.

ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

RELATED TOPICS:
English summary :A father who surrendered to suicide because of the fact that a girl child was born again

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...