ಸಿದ್ದರಾಮಯ್ಯರಿಗೆ ಟಿಪ್ಪು ಸುಲ್ತಾನ್, ಟಿಪ್ಪು ಟೋಪಿ ಪ್ರಿಯವಾದುದು | JANATA NEWS
ಚಿಕ್ಕಮಗಳೂರು : ಸಿದ್ದರಾಮಯ್ಯನವರಿಗೆ ಸಿದ್ರಾಮುಲ್ಲಾಖಾನ್ ಎಂದು ಹೆಸರಿಟ್ಟವರು ಮಡಿಕೇರಿ-ಮೈಸೂರಿನ ಜನ. ಅವರಿಗೆ ಪ್ರಿಯವಾಗಿರೋದು ಟಿಪ್ಪು ಟೋಪಿ. ಅದನ್ನೇ ಹೇಳಿದ್ದೇನೆ. ಟೋಪಿ ಅವರಿಗೆ ಆನಂದ ಕೊಡುವ ಸಂಗತಿ. ಅದನ್ನೇ ಹೇಳಿದ್ದೇನೆ ಎಂದರು.
ಜಿಲ್ಲೆಯ ಶೃಂಗೇರಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ ಜನಸಂಕಲ್ಪಯಾತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಗಳಾಗುತ್ತವೆ. ಸಿದ್ರಾಮುಲ್ಲಾ ಖಾನ್ ಎಂದು ನಾನು ಹೆಸರಿಟ್ಟಿಲ್ಲ. ಜನರೇ ಹೆಸರಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದರು.
ಈ ಜೇಳಿಕೆಗೆ ಸಿ ಟಿ ರವಿ ಸಮರ್ಥನೆ ನೀಡಿದ್ದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾಖಾನ್ ಎಂದು ನಾನಷ್ಟೇ ಹೇಳಿಲ್ಲ, ಈ ಹಿಂದೆ ಈಶ್ವರಪ್ಪ ಕೂಡ ಹೇಳಿದ್ದರು.
ಸಿದ್ದರಾಮಯ್ಯರಿಗೆ ಟಿಪ್ಪು ಸುಲ್ತಾನ್, ಟಿಪ್ಪು ಟೋಪಿ ಪ್ರಿಯವಾದುದು ಅಲ್ಲವೇ, ಅದಕ್ಕೆ ಹಾಗೆ ಹೇಳಿದೆ ಎಂದಿದ್ದಾರೆ. ನಾನು ಸಿದ್ದರಾಮಯ್ಯರಿಗೆ ಹೇಳಿದ್ದು, ಅಸಂಸದೀಯ ಪದವೂ ಅಲ್ಲ. ಬೈಗುಳವೂ ಅಲ್ಲ.
ಕಾಂಗ್ರೆಸ್ ಕಾರ್ಯಕರ್ತರು ಸದ್ಭಾವನೆಯಿಂದ ಬಂದರೆ ಅತಿಥಿಗಳು ಎಂದು ನಾವು ಭಾವಿಸುತ್ತೇವೆ, ಆದರೆ ದರ್ಪದಿಂದ ಬಂದರೆ ಅದೇ ಭಾವನೆಯಿಂದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ.