Fri,Dec01,2023
ಕನ್ನಡ / English

ಪರಪುರುಷನ ಜೊತೆ ಅಕ್ರಮ ಸಂಬಂಧ: ಗಂಡನ ಕೊಲೆ ಮಾಡಿ ಚರಂಡಿಗೆ ಶವ ಎಸೆದ ಹೆಂಡ್ತಿ | JANATA NEWS

30 Nov 2022
1438

ಬೆಂಗಳೂರು : ಪರಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಪ್ಲಾನ್​​ ಮಾಡಿ ಶವವನ್ನು ಮೋರಿಗೆ ಎಸೆದ ಘಟನೆ ನಡೆದಿದೆ.

ಬೆಂಗಳೂರಿನ ಸೋಮಶೆಟ್ಟಿಹಳ್ಳಿ ನಿವಾಸಿ ದಾಸೇಗೌಡ (48) ಕೊಲೆಯಾದ ವ್ಯಕ್ತಿ. ಈತನ ಪತ್ನಿ ಜಯಲಕ್ಷ್ಮಿ ಮತ್ತು ಈಕೆಯ ಪ್ರಿಯಕರ ರಾಜೇಶ್ ಆರೋಪಿಗಳಾಗಿದ್ದಾರೆ.

ಸೋಲದೇವಹಳ್ಳಿಯ ಠಾಣಾ ವ್ಯಾಪ್ತಿಯ ಫಾರ್ಮ್​​ಹೌಸ್​ವೊಂದರಲ್ಲಿ ದಾಸೇಗೌಡ ಮತ್ತು ಜಯಲಕ್ಷ್ಮಿ ದಂಪತಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ವಿವಾಹವಾಗಿ 16 ವರ್ಷವಾಗಿದ್ದು, ಇಬ್ಬರು ಮಕ್ಕಳಿದ್ದಾರೆ.

ಜಯಶ್ರೀಗೆ ರಾಜೇಶ್ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು‌‌.‌ ಗಂಡ ಮನೆಯಲ್ಲಿ ಇಲ್ಲದಿರುವಾಗ ಆಗಾಗ ರಾಜೇಶ್ ಬಂದು ಹೋಗುತ್ತಿದ್ದ‌. ಈ ವಿಚಾರ ತಿಳಿದು ಗಂಡ ಪತ್ನಿಯೊಂದಿಗೆ ಜಗಳವಾಡಿದ್ದ.‌ ಜಯಶ್ರೀ ಪ್ರಿಯಕರ ರಾಜೇಶ್​ ಬಳಿ ಹೇಳಿಕೊಂಡಿದ್ದಳು. ಇಬ್ಬರು ದಾಸೇಗೌಡನನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದರು.

ಬಳಿಕ ಹಿಂಬಾಗಿಲಿನ ಮೂಲಕ ಮನೆಗೆ ಹೊಕ್ಕಿದ್ದ ಪ್ರಿಯಕರ ದನದ ಕೊಟ್ಟಿಗೆಯಲ್ಲಿನ ಹಗ್ಗ ತಂದು ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಇಬ್ಬರು ಸೇರಿಕೊಂಡು ಬಳಿಕ ಕೈ ಕಾಲುಗಳಿಗೆ ಹಗ್ಗ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ಶವವಿರಿಸಿ ಕಾರಿನಲ್ಲಿ ತೆರಳಿದ್ದಾರೆ.

ಆರೋಪಿಗಳು ಶವವನ್ನು ಕಾರಿನಲ್ಲಿ ಕೊಂಡೊಯ್ದು ಮೈಸೂರು ಬೆಂಗಳೂರು ಹೆದ್ದಾರಿಯ ಮೋರಿಯಲ್ಲಿ ಎಸೆದಿದ್ದರು. ಮೋರಿಯಲ್ಲಿ ಸುಮಾರು 50 ಮೀಟರ್​ನಷ್ಟು ದೂರಕ್ಕೆ ಶವವನ್ನು ತುರುಕಿದ್ದ ಆರೋಪಿಗಳು, ಮೊಬೈಲ್​ಫೋನ್​ನನ್ನು ಅಲ್ಲಿಂದ 500 ಮೀಟರ್​ ದೂರದಲ್ಲಿ ಎಸೆದಿದ್ದರು.

ಬಳಿಕ ಮನೆಗೆ ಬಂದು ಮಾರನೇ ದಿನ ತನ್ನ ಗಂಡ ಕಾಣೆಯಾಗಿದ್ದಾನೆ ಎಂದು ಜಯಶ್ರೀ ದೂರು ನೀಡಿದ್ದಳು. ವಿಚಾರಣೆ ವೇಳೆ ಪ್ರಿಯಕರನನ್ನು ತಮ್ಮ ಎಂದು, ಪ್ರಿಯಕರ ಜಯಲಕ್ಷ್ಮೀಯನ್ನು ಅಕ್ಕ ಎಂದಿದ್ದರು. ಆದರೆ ಪತ್ನಿಯ ಕಾಲ್​ ಡಿಟೇಲ್ಸ್ ತೆಗೆದು ಪರಿಶೀಲನೆ ನಡೆಸಿದಾಗ ಅತಿಹೆಚ್ಚಿನ ಕರೆ ಪ್ರಿಯಕರನಿಗೆ ಹೋಗಿದ್ದು ಗೊತ್ತಾಗಿದ್ದು, ಆ ಬಳಿಕ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಅಸಲಿಯತ್ತು ಹೊರಬಿದ್ದಿದೆ.

RELATED TOPICS:
English summary :Illicit relationship with a man: Woman who killed her husband and threw his body into the drain

ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ

ನ್ಯೂಸ್ MORE NEWS...