Fri,Dec01,2023
ಕನ್ನಡ / English

ಸೋಶಿಯಲ್ ಮೀಡಿಯಾ ಮೂಲಕ 40 ಲಕ್ಷ ರೂ. ವಂಚನೆ! ಗಂಡನೂ ಸಾಥ್! | JANATA NEWS

01 Dec 2022
2412

ವಿಜಯಪುರ : ಯುವಕನೊಬ್ಬನಿಗೆ ಹಾಸನದ ಫೇಸ್‌ಬುಕ್‌ ಗೆಳತಿಯಿಂದ ಉಂಟಾಗಿದ್ದ 40 ಲಕ್ಷ ರೂ. ಪಂಗನಾಮ ಪ್ರಕರಣದ ಆರೋಪಿ ಮಹಿಳೆಯನ್ನು ವಿಜಯಪುರ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ.

ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಹಾಸನ ಮೂಲದ ಹುಡುಗಿ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮದ ಯುವಕ ಪರಶುರಾಮ.

ಪರಶುರಾಮ‌ ಎಂಬಾತ ಹೈದ್ರಾಬಾದ್ ನಲ್ಲಿ ಕಟ್ಟಡ ಕಾರ್ಮಿಕರ ಸೂಪರ್ ವೈಸರ್ ಆಗಿದ್ದ, ಅವನಿಗೆ 30 ಸಾವಿರ ಸಂಬಳ ಬರುತ್ತಿತ್ತು. ಈತನಿಗೆ ಫೇಸ್‌ಬುಕ್‌ ಮೂಲಕ ಫ್ರೆಂಡ್‌ಶಿಪ್‌ ರಿಕ್ವೆಸ್ಟ್‌ ಕಳುಹಿಸಿ ಪರಿಚಯ ಮಾಡಿಕೊಂಡ ಹಾಸನ ಮೂಲದ ಮಂಜುಳಾ ಪ್ರೀತಿಯ ನಾಟಕವಾಡಿ, ತಾನು ಐಎಎಸ್‌ ಓದುತ್ತಿರುವುದಾಗಿ ತಿಳಿಸಿ ಲಕ್ಷ ಲಕ್ಷ ಹಣವನ್ನು ಯುವಕನಿಂದ ಪಡೆದಿದ್ದಳು.

ಅವಳ ಓದಿಗಾಗಿ ಮನೆಯಲ್ಲಿ ಕೂಡಿಟ್ಟಿದ್ದ 5 ಲಕ್ಷ ರೂ. ಹಣ, ಒಂದು ಪ್ಲಾಟ್ ಸೇರಿ ಎಲ್ಲವನ್ನು ಮಾರಿ ಹಣ ಕಳುಹಿಸಿದ್ದನು. ಆದರೆ ಸುಮಾರು 40 ಲಕ್ಷ ದಷ್ಟು ‌ಹಣ ಕಳಿಸಿದರೂ ಅವಳಿಗೆ ಆತ ಭೇಟಿ ಆಗಿರಲಿಲ್ಲ.

ಈ ನಡುವೆ ಸಲುಗೆ ಬೆಳೆದಿತ್ತು. ಈ ಸಲುಗೆ ಪ್ರೀತಿಗೆ ತಿರುಗಿತ್ತು. ಇಬ್ಬರೂ ಒಬ್ಬರನೊಬ್ಬರು ನೋಡದೆಯೇ ಮನಸಾರೆ ಪ್ರೀತಿಸುತ್ತಿದ್ದರು. ಅವಳ ಫೇಸ್ ಬುಕ್ ಡಿಪಿ ನೋಡಿ ಮಾರುಹೋಗಿದ್ದ. ಅಂದಹಾಗೆ ಅಲ್ಲಿ ಇದ್ದಿದ್ದು ನಟಿ ಕೀರ್ತಿ ಸುರೇಶ್ ಅವರ ಫೋಟೋ.

ಈತ ಸ್ನಾನ ಮಾಡುವ ಸಂದರ್ಭದಲ್ಲಿ ವಿಡಿಯೋ ಕಾಲ್ ಮಾಡಿ ಅದನ್ನು ರಿಕಾರ್ಡ ಮಾಡಿಕೊಂಡಿದ್ದಳು. ಬಳಿಕ ಆ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೆಲ್ ಮಾಡಿ, ಹಣಕ್ಕಾಗಿ ಡಿಮ್ಯಾಂಡ್ ಇಟ್ಟು ಹಂತ ಹಂತವಾಗಿ ಲಕ್ಷಾಂತರ ರೂ. ಹಣವನ್ನು ಕಿತ್ತುಕೊಂಡಿದ್ದಾರೆ.

ಇದರಿಂದ ರೋಸಿ ಹೋದ ಯುವಕ ವಿಜಯಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದನು. ಪೊಲೀಸರು ಆರೋಪಿ ಮಂಜುಳಾಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ತನ್ನ ಗಂಡನೂ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಹಿಳೆ ಬಾಯಿ ಬಿಟ್ಟಿದ್ದಾರೆ. ಪೋಲಿಸರು ಬಂದ ಮಾಹಿತಿ ತಿಳಿದ ಮಂಜುಳಾ ಗಂಡ ಎಸ್ಕೇಪ್ ಆಗಿದ್ದಾನೆ.

ಈತನ‌ ಹಣದಲ್ಲಿ ಮಂಜುಳಾ 100 ಗ್ರಾಂ ಬಂಗಾರ, ಒಂದು ಹುಂಡೈ ಕಾರ್, ಬೈಕ್ ಖರೀದಿ ಮಾಡಿದ್ದಾಳೆ, ಜೊತೆಗೆ ಊರಲ್ಲಿ ಮನೆಯನ್ನು ಕೂಡಾ ಕಟ್ಟುತ್ತಿದ್ದಲು ಎನ್ನಲಾಗಿದೆ.

RELATED TOPICS:
English summary :40 lakh through social media. Fraud! Husband too!

ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ
 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ

ನ್ಯೂಸ್ MORE NEWS...