ಸಿದ್ದರಾಮಯ್ಯ ಬಿಜೆಪಿ ನಾಯಕ ಹೆಚ್ ವಿಶ್ವನಾಥ ಅವರ ಭೇಟಿ | JANATA NEWS
ಬೆಂಗಳೂರು : ಬಿಜೆಪಿ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ.
ವಿಶ್ವನಾಥ ಅವರು ಮಂಗಳವಾರ ಸಿದ್ದರಾಮಯ್ಯನವರ ಯೋಗಕ್ಷೇಮ ವಿಚಾರಿಸಲು ಬೆಂಗಳೂರಿನ ಅಧಿಕೃತ ನಿವಾಸಕ್ಕೆ ಆಗಮಿಸಿದ್ದರು. ಅವರ ಭೇಟಿಯ ಬಗ್ಗೆ ಹಲವಾರು ಊಹಾಪೋಹಗಳು ಹುಟ್ಟಿಕೊಂಡಿವೆ.
ನಿನ್ನೆ ವಿಶ್ವನಾಥ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾಡಿದ್ದರು. ಅದರ ಬೆನ್ನಲ್ಲೇ ಇವತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದಾರೆ.
RELATED TOPICS:
English summary :Siddaramaiah meets BJP leader H Vishwanath