ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ | JANATA NEWS
ಬೆಂಗಳೂರು : ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಮೇಲೂ ಪತಿಗೆ ಪತ್ನಿಯ ಮೇಲೆ ಅನುಮಾನ ಉಂಟಾಗಿ, ಕಿರುಕುಳಕ್ಕೆ ತಿರುಗಿ ಅದೀಗ ಪತ್ನಿಯ ಸಾವಿನಲ್ಲಿ ಕೊನೆಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೀಪ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಾರ್ಪೆಂಟರ್ ಆಗಿರುವ, ಪತಿ ಮೋಹನ್ಕುಮಾರ್ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಪತಿ ಮೋಹನ್ ಕುಮಾರ್ ಕಿರುಕುಳದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೀಪಾಳ ಕುಟುಂಬಸ್ಥರ ಆರೋಪ ಮಾಡಿದ್ದಾರೆ.
ಕಳೆದ 7 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇಬ್ಬರ ಮಧ್ಯೆ ಮದುವೆಯಾದ ಮೂರು ವರ್ಷಗಳ ಬಳಿಕ ಭಿನ್ನಾಭಿಪ್ರಾಯ ಉಂಟಾಗಿತ್ತು. ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಪತಿ, ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ದಂಪತಿ ಮಧ್ಯೆ ಕುಟುಂಬಸ್ಥರು ಎರಡು ಸಲ ರಾಜಿ ಪಂಚಾಯಿತಿ ನಡೆಸಿದ್ದರು. ಕಳೆದ ವಾರ ನಡೆದ ಎರಡನೇ ರಾಜಿ ಬಳಿಕ ದೀಪಾಳನ್ನು ಕುಟುಂಬಸ್ಥರು ಗಂಡನ ಮನೆಗೆ ಕಳಿಸಿದ್ದರು. ಆದರೆ ಗಂಡನ ಮನೆಗೆ ಬಂದ ನಾಲ್ಕೆ ದಿನಕ್ಕೆ ದೀಪಾ ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.