ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು | JANATA NEWS
ಚಿಕ್ಕಮಗಳೂರು : ಆ ದಿನಗಳನ್ನು ಮೆಲುಕು ಹಾಕಿದ್ರೆ ರೌಡಿ ಯಾರು ಎಂದು ಗೊತ್ತಾಗುತ್ತದೆ ಎಂದು ಶಾಸಕ ಸಿ.ಟಿ ರವಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ರೌಡಿಗಳು ಬಿಜೆಪಿ ಸೇರಿಕೊಳ್ಳುತ್ತಿರುವ ಬಗ್ಗೆ ಕಾಂಗ್ರೆಸ್ ಟೀಕಿಸುತ್ತಿದ್ದು, ಬಿಜೆಪಿ ರೌಡಿ ಮೋರ್ಚಾ ಮಾಡಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಇದಕ್ಕೆ ಕಿಡಿಕಾರಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಅವರು ಹೇಳಬೇಕು. ಅಗ್ನಿ ಶ್ರೀಧರ್ ಯಾರ ಹೆಸರು ಹೇಳಿದ್ದಾರೆ ಮತ್ತು ಅವರು ಯಾವ ಪಾರ್ಟಿ? ಕೊತ್ವಾಲ್ ರಾಮಚಂದ್ರ ಶಿಷ್ಯ ಯಾರು? ಜಯರಾಜ್ ಶಿಷ್ಯ ಯಾರು? ಆ ದಿನಗಳನ್ನು ಮೆಲುಕು ಹಾಕಿದರೆ ಗೊತ್ತಾಗುತ್ತದೆ ಸಿದ್ದರಾಮಯ್ಯನವರೇ, ಆ ದಿನಗಳನ್ನು ಮೆಲುಕು ಹಾಕಿದರೆ ರೌಡಿ ಯಾರು ಎಂದು ಗೊತ್ತಾಗುತ್ತದೆ ಎಂದು ಹೇಳಿದರು. ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ಈ ಹೇಳಿಕೆ ನೀಡಿದರು.