Tue,Aug04,2026
ಕನ್ನಡ / English

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು! | JANATA NEWS

07 Dec 2022

ಚಿತ್ರದುರ್ಗ : ಚಿತ್ರದುರ್ಗದ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ಮೃತಪಟ್ಟಿದ್ದು ಆತ್ಮಹತ್ಯೆಯೋ, ಹತ್ಯೆಯೋ ಎನ್ನುವ ಪ್ರಶ್ನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯ ಮನೆಯಲ್ಲಿ ಡಾ.ರೂಪಾ ಅವರು ಸೋಮವಾರ ಅನುಮಾಸ್ಪದವಾಗಿ ಸಾವನ್ನಪ್ಪಿದ್ದರು. ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಬೆಳಿಗ್ಗೆ 8 ಗಂಟೆಯ ವೇಳೆಗೆ ಪುತ್ರ ಗಮನಿಸಿ ಎರಡನೇ ಮಹಡಿಯಲ್ಲಿದ್ದ ತಂದೆ ಡಾ.ರವಿಗೆ ಮಾಹಿತಿ ನೀಡಿದ್ದಾನೆ. ವಿಷಯ ತಿಳಿದ ರವಿ ಕೂಡಲೇ ಧಾವಿಸಿ ಪತ್ನಿಯ ದೇಹವನ್ನು ಪರಿಶೀಲಿಸಿದ್ದಾರೆ, ತಲೆಯಲ್ಲಿ ತೀವ್ರ ರಕ್ತಸ್ರಾವ ಆಗಿದ್ದರಿಂದ ಕೂಡಲೇ. ತುರುವನೂರು ರಸ್ತೆಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮೃತದೇಹ ಸಾಗಿಸಿದ್ದಾರೆ. ಮನೆಯಲ್ಲಿ ಕಾಲುಜಾರಿ ಬಿದ್ದು ತಲೆಗೆ ಪೆಟ್ಟುಬಿದ್ದು ಮೃತಪಟ್ಟಿದ್ದಾಗಿ ರವಿ ಅವರು ಮಾಹಿತಿ ನೀಡಿದ್ದರು.

ರೂಪಾ ಅವರು ಸೋಮವಾರ ಬೆಳಿಗ್ಗೆ 6ಕ್ಕೆ ಹಾಸಿಗೆಯಿಂದ ಎದ್ದಿದ್ದರು. ಏರೊಬಿಕ್‌ಗೆ ತೆರಳಬೇಕಿದ್ದ ಅವರು ತರಬೇತುದಾರರು ರಜೆ ಹಾಕಿದ್ದರಿಂದ ಮನೆಯಲ್ಲಿಯೇ ಉಳಿಯಬೇಕಾಯಿತು. ಲೆಮನ್‌ ಟೀ ಸೇವಿಸಿದ ಬಳಿಕ ಪತಿ ಮನೆಯ ಎರಡನೇ ಮಹಡಿಯಲ್ಲಿದ್ದ ಜಿಮ್‌ಗೆ ತೆರಳಿದ್ದರು. 16 ವರ್ಷದ ಪುತ್ರ ಹಾಗೂ ಅತ್ತೆ ಮನೆಯಲ್ಲಿಯೇ ಇದ್ದರು.

ತಲೆಯ ಬಲಭಾಗದಿಂದ ಹಾರಿದ ಗುಂಡು ಎಡಭಾಗದಿಂದ ಹೊರಗೆ ಬಂದಿದೆ. ರೂಪಾ ಅವರ ತಲೆಯಿಂದ ಹೊರಗೆ ಬಂದ ಗುಂಡು ಗೋಡೆಗೆ ತಗುಲಿ ಟೇಬಲ್‌ ಮೇಲೆ ಬಿದ್ದಿದೆ. ಗುಂಡು ಹಾಗೂ ರಿವಾಲ್ವಾರ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಇಂಗ್ಲೆಂಡ್‌ನ ರಿವಾಲ್ವಾರ್‌ ಆಗಿದ್ದು, ಡಾ.ರವಿ ಪರವಾನಗಿ ಹೊಂದಿದ್ದರು..

ಪೋಸ್ಟ್ ಮಾರ್ಟಂ ಮಾಡಿದಮೇಲೆ ರೂಪಾಳ ಸಾವಿನ ಪ್ರಕರಣದಲ್ಲಿ ಅಸಲಿ ಸತ್ಯ ಬಯಲಿಗೆ ಬಂದಿದೆ. ಅದೇನಂದ್ರೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಬಯಲಿಗೆ ಬಂದಿದೆ

ಇನ್ನು ವೈದ್ಯೆ ರೂಪಾ ಸಾವನ್ನಪ್ಪಿದ್ದ ರೂಮಿನಲ್ಲಿ ಅವರು ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಸಿಕ್ಕಿದೆಯಂತೆ. ಆ ಪತ್ರದಲ್ಲಿ ಈ ಸಾವಿಗೆ ನಾನೇ ಕಾರಣ. ಹೃದಯಾಘಾತವಾಗಿ ಮೃತಪಟ್ಟಿದ್ದಾಗಿ ಹೇಳಿ, ಪೋಲೀಸರಿಗೆ ಈ ಕುರಿತು ಮಾಹಿತಿ ನೀಡಬೇಡಿ, ಎಂದು ಬರೆಯಲಾಗಿದೆಯಂತೆ. ತನ್ನ ಪತಿ ಡಾ.ರವಿಗೆ ಅಡ್ರೆಸ್ ಮಾಡಿ ಪತ್ರ ಬರೆದಿದ್ದ ರೂಪಾ, ನೀನು ನನಗೆ ಮೋಸ ಮಾಡಿದೆ, ನನ್ನಿಂದಲೂ ಕೆಲವು ತಪ್ಪುಗಳಾಗಿವೆ ಎಂದು ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿತ್ರದುರ್ಗ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ರೂಪಾ ಪತ್ರ ಬರೆದಿದ್ದು ಕನ್ನಡದಲ್ಲಿ ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ. ಸ್ವತಃ ವೈದ್ಯೆಯಾಗಿರುವ ರೂಪಾ ಕನ್ನಡ ಅಕ್ಷರಗಳಲ್ಲಿ ಲೆಟರ್ ಬರೆದು ಇಂಗ್ಲೀಷ್ನಲ್ಲಿ ಸಹಿ ಮಾಡಿದ್ದಾರೆ ಎಂಬ ಸಹಜ ಅನುಮಾನ ವ್ಯಕ್ತವಾಗಿದೆ.

ಇದರ ಮಧ್ಯೆ,ಡಾ. ರೂಪಾ ಖಿನ್ನತೆಗೆ ಒಳಗಾಗಿದ್ದಳು ಅನ್ನೋದ ಬೆಳಕಿಗೆ ಬಂದಿದೆ. ಹೌದು.. 25 ಎಕರೆ ಜಮೀನಿನಲ್ಲಿ ದಾಳಿಂಬೆ ಬೆಳೆದು ಕೋಟ್ಯಂತರ ರೂಪಾಯಿ ಸಾಲ‌ ಮಾಡಿ ಕೈ ಸುಟ್ಟುಕೊಂಡಿದ್ದರು. ಅದರ ಬಗ್ಗೆ ಹಲವು ಇಬ್ಬರ ನಡುವೆ ಚರ್ಚೆಯಾಗಿತ್ತು.. ಜೊತೆಗೆ ಹೋಟೆಲ್ ಖರೀದಿಸಿ ಅದ್ರಲ್ಲೂ ನಷ್ಟ ಅನುಭವಿಸಿದ್ದರು. ಇತ್ತೀಚೆಗೆ ಪೋಷಕರ ಸಾವಿನಿಂದ ವೈದ್ಯೆ ರೂಪಾ ಕುಗ್ಗಿಹೋಗಿದ್ದರು ಅಂತ ಹೇಳಲಾಗ್ತಿದೆ. ಇದೇ ಕಾರಣಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂಬಂತೆ ಗೋಚರವಾಗುತ್ತಿದ್ದು. ರೂಪಾ ಸಹೋದರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ತನಿಖೆಯ ಬಳಿಕ ನಿಜಾಂಶ ಹೊರಬರಲಿದೆ..

RELATED TOPICS:
English summary :Chitradurga doctor Rupa death case: The secret of death is revealed in the post mortem!

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...