ಪ್ರವಾಸಕ್ಕೆ ಮಕ್ಕಳನ್ನು ಕರೆತಂದಿದ್ದ ಶಾಲಾ ಬಸ್ ಪಲ್ಟಿ; 18 ಮಕ್ಕಳಿಗೆ ಗಾಯ | JANATA NEWS
ಶಿವಮೊಗ್ಗ : ಪ್ರವಾಸಕ್ಕೆಂದು ಮಕ್ಕಳನ್ನು ಕರೆತಂದಿದ್ದ ಶಾಲಾ ಬಸ್ ಪಲ್ಟಿಯಾಗಿರೋ ಘಟನೆ ಸಾಗರ ತಾಲೂಕಿನ ಹಿನ್ನೀರಿನ ತುಮರಿ ಸಮೀಪ ವಕ್ಕೊಡಿ ಬಳಿಯ ತಿರುವಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬಸ್ನಲ್ಲಿದ್ದ 18 ಮಕ್ಕಳಿಗೆ ಗಾಯವಾಗಿದ್ದು, 5 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :The school bus that came on the trip overturned; 18 children injured