ಕಾಮುಕ ಶಿಕ್ಷಕನಿಗೆ ಧರ್ಮದೇಟು ನೀಡಿದ ವಿದ್ಯಾರ್ಥಿನಿಯರು! | JANATA NEWS
ಮಂಡ್ಯ : ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿ ಶಾಲೆಯ ಉಸ್ತುವಾರಿ ಶಿಕ್ಷಕನ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿನಿಯರು, ಆತನಿಗೆ ಧರ್ಮದೇಟು ನೀಡಿರುವ ಘಟನೆ ಪಾಂಡವಪುರ ತಾಲೂಕಿನಲ್ಲಿ ಕಟ್ಟೇರಿ ಗ್ರಾಮದಲ್ಲಿ ನಡೆದಿದೆ
ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ನಿತ್ಯ ಲೈಗಿಂಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ಪ್ರೌಢ ಶಾಲೆಯೊಂದರ ಮುಖ್ಯಶಿಕ್ಷಕನಾಗಿದ್ದ ವ್ಯಕ್ತಿಗೆ ಅಲ್ಲಿದ್ದ ವಿದ್ಯಾರ್ಥಿನಿಯರ ವಸತಿ ನಿಲಯದ ಉಸ್ತುವಾರಿ ನೀಡಲಾಗಿತ್ತು. ನಿತ್ಯ ಸಂಜೆ ಸಮಯದಲ್ಲಿ ಹಾಸ್ಟೆಲ್ಗೆ ಬರುತ್ತಿದ್ದ ಮುಖ್ಯ ಶಿಕ್ಷಕ ತನ್ನ ಕೊಠಡಿಗೆ ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿನಿಯರು ಒಟ್ಟಾಗಿ ಸೇರಿ ಪೊರಕೆ, ದೊಣ್ಣೆಯಿಂದ ಮುಖ್ಯ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಅಶ್ಲೀಲ ವಿಡಿಯೋ ತೋರಿಸುವ ಜೊತೆಗೆ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದೂ ದೂರಿದ್ದಾರೆ. ಜೊತೆಗೆ ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕುತ್ತಿದ್ದ. ಯಾರಿಗಾದ್ರೂ ಹೇಳಿದ್ರೆ ಟಿಸಿಯಲ್ಲಿ ಬ್ಯಾಡ್ ಕ್ಯಾರೆಕ್ಟರ್ ಎಂದು ನಮೂದಿಸುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕೆಆರ್ಎಸ್ ಪೊಲೀಸರು ಆರೋಪಿ ಕಾಮುಕ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.