ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಕೆ | JANATA NEWS
ಬೆಳಗಾವಿ : ಬಿಜೆಪಿ ಎಂಎಲ್ಸಿ ಬಸವರಾಜ್ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆ ವೇಳಿ ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಆರ್ ಅಶೋಕ್, ಮುರುಗೇಶ್ ನಿರಾಣಿ, ಜೆ ಸಿ ಮಾಧುಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು. ನಾಳೆ ಬುಧವಾರ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಹೊರಟ್ಟಿ, ನನಗೆ ಇದೊಂದು ಅವಿಸ್ಮರಣೀಯ ದಿನ. ನಾನು ನಾಮಪತ್ರ ಸಲ್ಲಿಸುವಾಗ ಸಿಎಂ, ಯಡಿಯೂರಪ್ಪ, ಅಶೋಕ ಸೇರಿ ಸಚಿವರು ಬಂದಿದ್ದಾರೆ. ಈ ಹಿಂದೆ ನಾನು ಬಹಳ ಸಲ ನಾಮಪತ್ರ ಸಲ್ಲಿಸಿದ್ದೇನೆ. ಆಗ ಸಿಎಂ ಸೇರಿ ಇಷ್ಟು ಜನ ಬಂದಿರಲಿಲ್ಲ. ಹಿಂದೆ ರಾಮಕೃಷ್ಣ ಹೆಗಡೆ ಅವರನ್ನು ಬಿಟ್ಟರೆ ಯಾರೂ ಬಂದಿರಲಿಲ್ಲ. ಆದರೆ ಇಂದು ನಮ್ಮ ಪಕ್ಷದ ನಾಯಕರೆಲ್ಲರೂ ಬಂದಿದ್ದರು. ನಾನು ಅತ್ಯಂತ ವಿಶ್ವಾಸದಿಂದ ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷ ನನ್ನ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸವನ್ನು ಎಂದೆಂದೂ ದುರುಪಯೋಗ ಮಾಡಲ್ಲ. ನನ್ನ ಮೇಲೆ ಇಟ್ಟಿರುವ ವಿಶ್ವಾಸ ಕಾಯ್ದುಕೊಂಡು, ಪಕ್ಷಕ್ಕೆ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವಂತೆ ಕೆಲಸ ಮಾಡಲಿದ್ದೇನೆ ಎಂದರು.