Fri,Apr26,2024
ಕನ್ನಡ / English

ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್, ಸ್ಫೋಟದ ಹಿಂದಿದೆ... | JANATA NEWS

29 Dec 2022
2742

ಹಾಸನ : ಹಾಸನ ನಗರದಲ್ಲಿ ಕೋರಿಯರ್‌ ಅಂಗಡಿಯೊಂದರಲ್ಲಿ ಡಿಸೆಂಬರ್ 26 ರಂದು ಮಿಕ್ಸಿ ಬ್ಲಾಸ್ಟ್‌ ಆಗಿತ್ತು. ಈ ಮಿಕ್ಸಿರ್​​​​​​​ ಬ್ಲಾಸ್ಟ್​​ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​ ಸಿಕ್ಕಿದೆ.

ಘಟನೆ ಸಂಬಂಧ ಪೊಲೀಸರು ಹಾಸನ ನಗರದ ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದ ಮಿಕ್ಸಿಯಲ್ಲಿ ಸ್ಫೋಟಕ ಅಳವಡಿಸಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹಾಸನ ನಿವಾಸಿಯಾಗಿದ್ದ ಮಹಿಳೆಯ ವಿಳಾಸಕ್ಕೆ ಪಾರ್ಸೆಲ್​ ಬಂದಿರುವುದು ಬೆಳಕಿಗೆ ಬಂದಿತ್ತು. ಕೊರಿಯರ್ ಮಾಲೀಕರು ಸಹ ಬಂದಿದ್ದ ಪಾರ್ಸೆಲ್​​ಅನ್ನು, ಮಹಿಳೆಯ ವಾಸಿಸುತ್ತಿದ್ದ ವಿಳಾಸಕ್ಕೆ ತಲುಪಿಸಿದ್ದರು.

ಆದರೆ ಪಾರ್ಸೆಲ್​​ ಮೇಲೆ ಯಾರು ಕಳುಹಿಸಿದ್ದಾರೆ ಎಂಬ ಮಾಹಿತಿ ಇಲ್ಲದ ಕಾರಣ ಮಹಿಳೆ ಪಾರ್ಸೆಲ್​​ಅನ್ನು ಮತ್ತೆ ​ಕೊರಿಯರ್​ ಸೆಂಟರ್​​ಗೆ ವಾಪಸ್ ನೀಡಿದ್ದರು. ಆ ವೇಳೆ ಕೊರಿಯರ್ ಸೆಂಟರ್ ಮಾಲೀಕರು, ಪಾರ್ಸೆಲ್​ ವಾಪಸ್ ಕಳುಹಿಸಲು 350 ಶುಲ್ಕ ರೂಪಾಯಿ ಶುಲ್ಕ ಆಗುತ್ತೆ ಅಂತ ಮಹಿಳೆಗೆ ತಿಳಿಸಿದ್ದರಂತೆ. ಆದರೆ ಪಾರ್ಸೆಲ್​ ಮೇಲೆ ಯಾವುದೇ ವಿಳಾಸ ಇಲ್ಲ, ಇದು ನನಗೆ ಬೇಡ ನೀವೇ ಏನಾದ್ರು ಮಾಡಿಕೊಳ್ಳಿ ಅಂತ ಹೇಳಿ ಆಕೆ ಅಲ್ಲಿಂದ ವಾಪಸ್ ಆಗಿದ್ದರಂತೆ. ಪಾರ್ಸೆಲ್​ ವಾಪಸ್ ಆಗಿದ್ದ ಕಾರಣ ಕೊರಿಯರ್ ಸೆಂಟರ್ ಮಾಲೀಕರು ಏನು ಮಾಡೋದು ಅಂತ ತಿಳಿಸಿಯದೇ, ಪಾರ್ಸೆಲ್ ನ್ನ ಟೇಬಲ್​ ಮೇಲಿಂದ ಕೆಳಗೆ ಇಡಲು ಮುಂದಾಗಿದ್ದ ವೇಳೆ ಮಿಕ್ಸಿ ಸ್ಫೋಟಗೊಂಡಿದೆ.

ಗಾಯಗೊಂಡಿದ್ದ ಕೋರಿಯರ್‌ ಮಳಿಗೆ ಮಾಲೀಕ ಶಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತನ ಕೈಗೆ ದೊಡ್ಡ ತೀವ್ರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ಪ್ರಾರಂಭಿಸಿದಾಗ ಭಯಾನಕ ಸ್ಫೋಟಕ ಸತ್ಯ ಬಯಲಾಗಿದೆ. ಅದೇನೆಂದರೆ..

ಈ ಮೊದಲೇ ವಿವಾಹ ಆಗಿದ್ದ ಮಹಿಳೆಯ ಪತಿಗೆ ಡಿವೋರ್ಸ್​ ನೀಡಿ ಮ್ಯಾಟ್ರಿಮೋನಿಯಲ್ಲಿ ತನ್ನ ಫೋಟೋವನ್ನ ಅಪ್‌ಲೋಡ್ ಮಾಡಿದ್ದಳು. ಈ ಫೋಟೋ ನೋಡಿದ ಆರೋಪಿ ಅನೂಪ್, ಮದುವೆ ಪ್ರಸ್ತಾಪ ಮಾಡಿದ್ದರು. ಇದಕ್ಕೆ ಮಹಿಳೆ ಸಮ್ಮತಿ ಸೂಚಿಸಿದ್ದಳು, ನಂತರ ಇಬ್ಬರೂ ಜೊತೆಯಲ್ಲೇ ಸುತ್ತಾಡಿದ್ದರು. ಆದರೆ ಕೆಲವು ದಿನಗಳಿಂದ ಇಬ್ಬರೂ ಬೇರೆಬೇರೆ ಆಗಿದ್ದರು ಎನ್ನಲಾಗಿದೆ.

ಮಹಿಳೆ, ಅನೂಪ್‌ ಕುಮಾರ್‌ ನಿಂದ ಲಕ್ಷಾಂತರ ರೂಪಾಯಿ ಹಣ ಸಾಲ ಪಡೆದುಕೊಂಡಿದ್ದರಂತೆ. ಆದರೆ ಹಣ ಪಡೆದುಕೊಂಡ ನಂತರ ಮಹಿಳೆ ತನ್ನ ವರಸೆ ಬದಲಿಸಿ, ಕೊಟ್ಟ ಹಣವನ್ನು ವಾಪಸ್ ಕೊಡದೆ, ಇತ್ತ ಮದುವೆಯೂ ಆಗದೆ ಆರೋಪಿಯಿಂದ ಅಂತರ ಕಾಯ್ದುಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಇದರಿಂದ ಕೆರಳಿದ್ದ ಪ್ರಿಯಕರ ಅನೂಪ್.. ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಪಾರ್ಸಲ್ ಕಳುಹಿಸಿ ಮಹಿಳೆ ಹತ್ಯೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ.

RELATED TOPICS:
English summary :Big twist in Mixi blast case, behind the blast...

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...