Sat,Jul27,2024
ಕನ್ನಡ / English

ಬಿಜೆಪಿಗೆ ಬಹುಮತ ನೀಡಿ, ಕುಟುಂಬ ರಾಜಕಾರಣದ, ಜಾತಿವಾದದ, ಭ್ರಷ್ಟಾಚಾರ ಪಕ್ಷವನ್ನ ಮೂಲೆಗೆ ಕಳುಹಿಸಿ: ಅಮಿತ್ ಶಾ | JANATA NEWS

31 Dec 2022
1797

ಬೆಂಗಳೂರು : ಒಂದು ಬಾರಿ ಬಿಜೆಪಿಗೆ ಬಹುಮತ ನೀಡಿ, ಕುಟುಂಬ ರಾಜಕಾರಣದ, ಜಾತಿವಾದದ, ಭ್ರಷ್ಟಾಚಾರ ಪಕ್ಷವನ್ನ ಮೂಲೆಗೆ ಕಳುಹಿಸಿ ಎಂದು ಷಾ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಬೂತ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು ”ಸಿದ್ದರಾಮಯ್ಯ, ಕುಮಾರಸ್ವಾಮಿ ನೋಡಿ ಜನಕ್ಕೆ ಸಾಕಾಗಿದೆ” ಮೋದಿ ಅಭಿವೃದ್ಧಿ ನೋಡಿ ಕರ್ನಾಟಕ ಜನ ಮತ ಹಾಕುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಯೋಜನೆ ನೀಡಿದ್ದಾರೆ ಎಂದು ನುಡಿದರು.

ಗರೀಬಿ ಹಠಾವೋ ಯೋಜನೆ ತಂದರೂ ಕಾಂಗ್ರೆಸಿಗರು ಬಡತನ ನಿರ್ಮೂಲನೆ ಮಾಡಿಲ್ಲ, ಬಡವರನ್ನೇ ನಿರ್ಮೂಲನೆ ಮಾಡಿದರು, ಅವರನ್ನು ಅಭಿವೃದ್ಧಿ ಆಗದಂತೆ ನೋಡಿಕೊಂಡರು. ಆದರೆ ನರೇಂದ್ರ ಮೋದಿ ಅವರ ಸರ್ಕಾರ ಬಡವರ ಅಭಿವೃದ್ಧಿಗೆ ಹಲವು ಯೋಜನೆ ತಂದಿತು. ಕರೊನಾ ಬಂದಾಗಲೂ ಮೋದಿಯವರು ಲಸಿಕೆ ತಂದು ಎಲ್ಲರಿಗೂ ಉಚಿತವಾಗಿ ಕೊಡಿಸಿದರು. ದೇವೇಗೌಡ, ಸಿದ್ದರಾಮಯ್ಯ ಬಡವರ ಬಗ್ಗೆ ಮಾತನಾಡುತ್ತಾರೆ, ಅವರು ಬಡತನ ನಿರ್ಮೂಲನೆ ಮಾಡಿದ್ರಾ? ಬಹಿರಂಗ ಚರ್ಚೆಗೆ ಬರಲಿ, ನಾನು ಸವಾಲು ಹಾಕುತ್ತೇನೆ ಎಂದು ಷಾ ಹೇಳಿದರು.

ಕಾಂಗ್ರೆಸ್-ಜೆಡಿಎಸ್ ಒಂದೇ ನಾಣ್ಯದ ಎರಡು ಮುಖ. ಜೆಡಿಎಸ್​ನವರು ನಮ್ಮ ಜೊತೆ ಬರಲು ಯತ್ನಿಸುತ್ತಾರೆ. ಆದರೆ ನಾವು ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ. ಈ ಸಲ ನೇರಾನೇರ ತ್ರಿಕೋನ ಹೋರಾಟ ಇರಲಿದೆ, ನಾವು ನೇರವಾಗಿ ಸ್ಪರ್ಧೆ ಮಾಡಿ ವಿಜಯ ಪಡೆಯುತ್ತೇವೆ, ಯಾರು ಬೇಕು ಎಂದು ಜನರು ತೀರ್ಮಾನ ಮಾಡಲಿ ಎಂದು ಷಾ ಹೇಳಿದರು.

ಬಿಜೆಪಿ ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ಮಾಜಿ ಪ್ರಧಾನಿ ದೇವೇಗೌಡ, ಸಿದ್ದರಾಮಯ್ಯ ಹೆಸರು ಪ್ರಸ್ತಾಪಿಸಿ ಏರುಧ್ವನಿಯಲ್ಲಿ ವಾಗ್ದಾಳಿ ನಡೆಸಿದ ಅಮಿತ್ ಶಾ, ಕಾಂಗ್ರೆಸ್ ತುಕ್ಡೇ ತುಕ್ಡೇ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಜೆಡಿಎಸ್ ಚುನಾವಣೆ ಬಂದಾಗ ಬಿಜೆಪಿ ಜೊತೆ ಒಪ್ಪಂದದ ಬಗ್ಗೆ ಮಾತನಾಡುತ್ತದೆ. ಆದರೆ ಬಿಜೆಪಿ ಏಕಾಂಗಿಯೇ ಚುನಾವಣೆ ಎದುರಿಸಲಿದೆ. ಏಕಾಂಗಿಯಾಗಿಯೇ ಅಧಿಕಾರಕ್ಕೆ ಬರಲಿದೆ. ಯಾರ ಜೊತೆಯೂ ಯಾವ ಹೊಂದಾಣಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಲ್ಲಿ ಟಿಪ್ಪು ಸುಲ್ತಾನ್ ನ ಹೀರೊ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​​ ವಿರುದ್ಧ ವಾಗ್ದಾಳಿ ಮಾಡಿದರು.ದೇವೇಗೌಡರ ವಿರುದ್ಧ ವಾಗ್ದಾಳಿ ಮುಂದುವರೆಸಿ, ನೀವು ಪ್ರಧಾನಿ ಆಗಿದ್ದೀರಿ. ಮುಖ್ಯಮಂತ್ರಿ ಆಗಿದ್ದೀರಿ ಆದರೂ ಏನು ಮಾಡಿಲ್ಲ. ಆದರೆ ನಾವು ಏನು ಮಾಡಿದ್ದೇವೆ ಎಂದು ನಮ್ಮ ಯುವ ಮೋರ್ಚಾ ಕಾರ್ಯಕರ್ತರು ನಿಮಗೆ ಹೇಳುತ್ತಾರೆ ಎಂದರು.

ಜನರನ್ನು ತಲುಪುವುದಕ್ಕೆ ಇದು ಸರಿಯಾದ ಸಮಯ. ಕಾರ್ಯಕರ್ತರು ತಲೆಬಗ್ಗಿಸುವ ರೀತಿಯ ಕೆಲಸ ಮಾಡಿಲ್ಲ. ಬಡವರ ಮನೆವರೆಗು ವಿದ್ಯುತ್ ತಲುಪುವಂತೆ ಮಾಡಿದ್ದು ನಾವು. ಕಟ್ಟಕಡೆಯ ಹಳ್ಳಿಗಳಿಗೆ ಅಡುಗೆ ಅನಿಲ ತಲುಪಿಸಿದ್ದು ನಾವೆ.. ಮೋದಿಯವರ ಸಂದೇಶ ತೆಗೆದುಕೊಂಡು ಮನೆ ಮನೆಗೆ ಹೋಗಬೇಕು ಎಂದು ಬೂತ್ ಕಾರ್ಯಕರ್ತರಿಗೆ ಷಾ ಕರೆ ನೀಡಿದರು. ಒಂದು ಬಾರಿ ಬಿಜೆಪಿಗೆ ಬಹುಮತ ನೀಡಿ, ಕುಟುಂಬ ರಾಜಕಾರಣದ, ಜಾತಿವಾದದ, ಭ್ರಷ್ಟಾಚಾರ ಪಕ್ಷವನ್ನ ಮೂಲೆಗೆ ಕಳುಹಿಸಿ ಎಂದು ಷಾ ಹೇಳಿದರು.

ಜೆಡಿಎಸ್ ಕಾಂಗ್ರೆಸ್ ಚುನಾವಣೆ ಹತ್ತಿರ ಬರುತ್ತಾ ಇದ್ದಂತೆ ಒಟ್ಟಿಗೆ ಕೂರುತ್ತಾರೆ. ಅವರ ಆಡಳಿತ ನೋಡಿದ್ದೀರಿ. ಯಡಿಯೂರಪ್ಪ ಮತ್ತು ಬೊಮ್ಮಾಯಿ‌ ಯಶಸ್ವಿ ಆಗಿ ಸರ್ಕಾರ ನಡೆಸಿದ್ದಾರೆ. ದಕ್ಷಿಣದಲ್ಲಿ ಬಿಜೆಪಿಯನ್ನು ಬಲಿಷ್ಠ ಮಾಡಬೇಕಿದೆ. ದಕ್ಷಿಣ ಭಾರತಕ್ಕೆ ಕರ್ನಾಟಕ ಹೆಬ್ಬಾಗಿಲು. ಕರ್ನಾಟಕದ ಮೂಲಕ‌ ದಕ್ಷಿಣ ಭಾರತಕ್ಕೆ ಬಿಜೆಪಿ ಪ್ರವೇಶಿಸುತ್ತಿದೆ ಎಂದು ಹೇಳಿದರು.

ಮುಂದಿನ 6 ತಿಂಗಳು ಕಾರ್ಯಕರ್ತರು ಪಕ್ಷವನ್ನು ಬಲಪಡಿಸಿ. ಈ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯೋಣ. ಕರ್ನಾಟಕದ ಪ್ರತಿ ಬೂತ್​ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿ. ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ. 2023ರ ಚುನಾವಣೆಯಲ್ಲಿ ಗೆದ್ದು ಮತ್ತೆ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED TOPICS:
English summary :Give majority to BJP, send party of family politics, casteism, corruption to corner: Amit Shah

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ನ್ಯೂಸ್ MORE NEWS...