ಬಸ್ ಇಲ್ಲದೇ ನಡೆದುಕೊಂಡು ಹೊರಟಿದ್ದ ವಿದ್ಯಾರ್ಥಿನಿಗೆ ಕಾರು ಡಿಕ್ಕಿ, ವಿದ್ಯಾರ್ಥಿನಿ ಸಾವು | JANATA NEWS
ಬೆಳಗಾವಿ : ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದುಕೊಂಡು ಹೋಗಿದೆ. ಅವರಲ್ಲಿ ಒಬ್ಬಾಕೆ ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.
ಕಿತ್ತೂರು ತಾಲೂಕಿನ ನಿಚ್ಛಣಕಿ ಗ್ರಾಮದ ಕಿತ್ತೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಅಕ್ಕವ್ವ ಹೂಲಿಕಟ್ಟಿ ಮೃತ ವಿದ್ಯಾರ್ಥಿನಿ. ಇನ್ನಿಬ್ಬರಿಗೆ ಗಂಭೀರ ಗಾಯಗಳು ಉಂಟಾಗಿವೆ.
ಪಟ್ಟಣದ ಸರೋಜಿನಿ ತಾಯಿ ಮಾರಿಹಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಸಮರ್ಪಕ ಬಸ್ ಸೌಲಭ್ಯವಿಲ್ಲದೆ, ಶನಿವಾರ ಎಲ್ಲ ವಿದ್ಯಾರ್ಥಿನಿಯರು ಕಿತ್ತೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದರು.
ಪ್ರತಿಭಟನೆಯ ನಂತರ ಗ್ರಾಮಕ್ಕೆ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಡೆದುಕೊಂಡು ಗ್ರಾಮಕ್ಕೆ ತೆರಳುತ್ತಿದ್ದಾಗ ನಿಚ್ಚಣಕಿ ಗ್ರಾಮದ ಹತ್ತಿರ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 3 ಜನ ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದವು. ಅದರಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅಕ್ಷತಾ ಈರಪ್ಪ ಹೂಲಿಕಟ್ಟಿ ಕಾರಿನ ರಬ್ಬಸಕ್ಕೆ ಪುಟಿದು ಬಿದ್ದು ಗಂಭೀರ ಗಾಯಗಳಾಗಿದ್ದವು. ಬೆಳಗಾವಿ ಕೆ.ಎಲ್.ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಅಸುನೀಗಿದ್ದಾಳೆ.
ಇದೀಗ ಪ್ರತಿಭಟನೆ ನಡೆಸಿದರೂ ಬಸ್ ವ್ಯವಸ್ಥೆ ಕಲ್ಪಿಸದ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.