Sun,Oct26,2025
ಕನ್ನಡ / English

ದೇಹವನ್ನು ಅಗ್ನಿಗೆ ಅರ್ಪಿಸಿ, ಸ್ಮಾರಕ ಕಟ್ಟಬೇಡಿ: ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರದಲ್ಲಿ ಏನಿದೆ? | JANATA NEWS

03 Jan 2023

ವಿಜಯಪುರ : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಯೋಸಹಜ ಅನಾರೋಗ್ಯದ ಕಾರಣದಿಂದ ನಿನ್ನೆ ಸಂಜೆ ದೈವಾಧೀನರಾಗಿದ್ದಾರೆ.

ನಾಡಿನ ಪ್ರಸಿದ್ಧ ಪ್ರವಚನಕಾರ, ಭಕ್ತರ ಮನದಲ್ಲಿ ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ಸಿದ್ದೇಶ್ವರ ಶ್ರೀಗಳು ರಚಿಸಿದ್ದ ಅಂತಿಮ ಅಭಿವಂದನ ಪತ್ರ ಇಲ್ಲಿದೆ.

ಮುಖ್ಯವಾಗಿ ನನ್ನ ಯಾವುದೇ ಬಗೆಯ ಸ್ಮಾರಕ ನಿರ್ಮಾಣ ಮಾಡಬಾರದೆಂದು 2014ರಲ್ಲೇ ವಿಲ್ ಬರೆದಿದ್ದರು. ಈ ಪತ್ರಕ್ಕೆ ನ್ಯಾಯಾಧೀಶರು ಸಹಿ ಹಾಕಿದ್ದಾರೆ. ನಿನ್ನೆ ವೈಕುಂಠ ಏಕಾದಶಿ ದಿನವಾಗಿದ್ದು ಸ್ವರ್ಗದ ಎಲ್ಲ ಬಾಗಿಲುಗಳು ತೆರೆದಿರುತ್ತವೆ ಎಂದು ಹಿಂದೂ ಪೌರಾಣಿಕ ನಂಬಿಕೆ. ಸಿದ್ದೇಶ್ವರ ಶ್ರೀಗಳು ಇಂಥ ವಿಶೇಷ ದಿನದಂದೇ ಇಹಲೋಕ ತ್ಯಜಿಸಿದ್ದಾರೆ. ಇವರು ಅಂತಿಮ ಅಭಿವಂದನ ಪತ್ರದ ಸಾಲುಗಳು ಹೀಗಿವೆ..

ಬದುಕು ಅನುಭವಗಳ ಪ್ರವಾಹ. ಅದರ ಸಿರಿವಂತಿಕೆಯು ವಿಶ್ವ ಚಿಂತನೆ ಹಾಗೂ ಸತ್ಯ ಶೋಧನೆಗಳಿಂದ ಅದರ ಸೌಂದರ್ಯವು ರಾಗ, ದ್ವೇಷ ರಹಿತವಾದ ಹಾಗೂ ಅಸೀಮಿತವಾದ ಸದ್ಭಾವದಿಂದ. ಅದನ್ನು ಸುಭಗ ಹಾಗೂ ಸಮೃದ್ಧಗೊಳಿಸುವುದೇ ಸಾಧನೆ. ಅಂತಹ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೇ ಧರ್ಮ. ಅದು ಸ್ವ-ಪರ ನೆಮ್ಮದಿಗೆ ಕಾರಣ. ನನ್ನದು ಆವೇಗವಿಲ್ಲದ, ಸಾವಧಾನದ ಸಾಮಾನ್ಯ ಬದುಕು. ಅದನ್ನು ರೂಪಿಸಿದವರು ಗುರುದೇವರು.

ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹ- ಹೃದಯರು, ಸಾಧಕರು ಹಾಗೂ ಶ್ರೀ ಸಾಮಾನ್ಯರು. ನಿಸರ್ಗವು ಮೈಮನಸ್ಸುಗಳಿಗೆ ತಂಪನ್ನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿ ಬೆಳಗ ಹರಡಿವೆ. ಜಾಗತಿಕ ತತ್ವಜ್ಞಾನಿಗಳ ಮತ್ತು ವಿಜ್ಞಾನಿಗಳ ಶೋಧನೆಗಳು ದೃಷ್ಠಿಯ ಪರಿಸೀಮೆಯನ್ನು ದೂರ ದೂರ ಸರಿಸಿವೆ. ಆದ್ದರಿಂದಲೇ ನಾನು ಎಲ್ಲರಿಗೂ ಎಲ್ಲದಕ್ಕೂ ಉಪಕೃತ. ಬದುಕು ಮುಗಿಯುತ್ತಿದೆ. ದೀಪ ಆರಿದಂತೆ. ತೆರೆ ಅಡಗಿದಂತೆ. ಮೇಘ ಕರಗಿದಂತೆ. ಉಳಿಯುವುದು ಬರೀ ಬಯಲು. ಮಹಾಮೌನ, ಶೂನ್ಯ ಸತ್ಯ. ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು. ಅದಕ್ಕಾಗಿ ಈ ಅಂತಿಮ ಅಭಿವಂದನ ಪತ್ರ.

ದೇಹದ ವಿಷಯದಲ್ಲಿ ಒಂದೆರಡು ಆಶಯಗಳು -
ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯರ್ಪಿತ ಮಾಡುವುದು. ಶ್ರಾದ್ಧಿಕ ವಿಧಿ-ವಿಧಾನಕರ್ಮಗಳು ಅನಗತ್ಯ. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು. ಯಾವುದೇ ಬಗೆಯ ಸ್ಮಾರಕ ನಿರ್ಮಿಸಲಾಗದು.

ಅಂತಿಮ ನೆನಹು; "ಸತ್ಯವೂ ಇಲ್ಲ, ಅಸತ್ಯವೂ ಇಲ್ಲ. ಸಹಜವೂ ಇಲ್ಲ, ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ, ಇಲ್ಲ ಎಂಬುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು". ಅಂತ್ಯಃ ಪ್ರಣಾಮಾಂಜಲಿಃ! ಎಂದು ಅಭಿವಂದನಾ ಪತ್ರವನ್ನು ಶ್ರೀಗಳು ಬರೆದಿದ್ದಾರೆ.

RELATED TOPICS:
English summary :Offer the body to fire, do not build a monument: What is in Siddeshwar Sri final eulogy?

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...