Wed,Aug05,2026
ಕನ್ನಡ / English

ದೇಹವನ್ನು ಅಗ್ನಿಗೆ ಅರ್ಪಿಸಿ, ಸ್ಮಾರಕ ಕಟ್ಟಬೇಡಿ: ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರದಲ್ಲಿ ಏನಿದೆ? | JANATA NEWS

03 Jan 2023

ವಿಜಯಪುರ : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಯೋಸಹಜ ಅನಾರೋಗ್ಯದ ಕಾರಣದಿಂದ ನಿನ್ನೆ ಸಂಜೆ ದೈವಾಧೀನರಾಗಿದ್ದಾರೆ.

ನಾಡಿನ ಪ್ರಸಿದ್ಧ ಪ್ರವಚನಕಾರ, ಭಕ್ತರ ಮನದಲ್ಲಿ ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ಸಿದ್ದೇಶ್ವರ ಶ್ರೀಗಳು ರಚಿಸಿದ್ದ ಅಂತಿಮ ಅಭಿವಂದನ ಪತ್ರ ಇಲ್ಲಿದೆ.

ಮುಖ್ಯವಾಗಿ ನನ್ನ ಯಾವುದೇ ಬಗೆಯ ಸ್ಮಾರಕ ನಿರ್ಮಾಣ ಮಾಡಬಾರದೆಂದು 2014ರಲ್ಲೇ ವಿಲ್ ಬರೆದಿದ್ದರು. ಈ ಪತ್ರಕ್ಕೆ ನ್ಯಾಯಾಧೀಶರು ಸಹಿ ಹಾಕಿದ್ದಾರೆ. ನಿನ್ನೆ ವೈಕುಂಠ ಏಕಾದಶಿ ದಿನವಾಗಿದ್ದು ಸ್ವರ್ಗದ ಎಲ್ಲ ಬಾಗಿಲುಗಳು ತೆರೆದಿರುತ್ತವೆ ಎಂದು ಹಿಂದೂ ಪೌರಾಣಿಕ ನಂಬಿಕೆ. ಸಿದ್ದೇಶ್ವರ ಶ್ರೀಗಳು ಇಂಥ ವಿಶೇಷ ದಿನದಂದೇ ಇಹಲೋಕ ತ್ಯಜಿಸಿದ್ದಾರೆ. ಇವರು ಅಂತಿಮ ಅಭಿವಂದನ ಪತ್ರದ ಸಾಲುಗಳು ಹೀಗಿವೆ..

ಬದುಕು ಅನುಭವಗಳ ಪ್ರವಾಹ. ಅದರ ಸಿರಿವಂತಿಕೆಯು ವಿಶ್ವ ಚಿಂತನೆ ಹಾಗೂ ಸತ್ಯ ಶೋಧನೆಗಳಿಂದ ಅದರ ಸೌಂದರ್ಯವು ರಾಗ, ದ್ವೇಷ ರಹಿತವಾದ ಹಾಗೂ ಅಸೀಮಿತವಾದ ಸದ್ಭಾವದಿಂದ. ಅದನ್ನು ಸುಭಗ ಹಾಗೂ ಸಮೃದ್ಧಗೊಳಿಸುವುದೇ ಸಾಧನೆ. ಅಂತಹ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೇ ಧರ್ಮ. ಅದು ಸ್ವ-ಪರ ನೆಮ್ಮದಿಗೆ ಕಾರಣ. ನನ್ನದು ಆವೇಗವಿಲ್ಲದ, ಸಾವಧಾನದ ಸಾಮಾನ್ಯ ಬದುಕು. ಅದನ್ನು ರೂಪಿಸಿದವರು ಗುರುದೇವರು.

ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹ- ಹೃದಯರು, ಸಾಧಕರು ಹಾಗೂ ಶ್ರೀ ಸಾಮಾನ್ಯರು. ನಿಸರ್ಗವು ಮೈಮನಸ್ಸುಗಳಿಗೆ ತಂಪನ್ನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿ ಬೆಳಗ ಹರಡಿವೆ. ಜಾಗತಿಕ ತತ್ವಜ್ಞಾನಿಗಳ ಮತ್ತು ವಿಜ್ಞಾನಿಗಳ ಶೋಧನೆಗಳು ದೃಷ್ಠಿಯ ಪರಿಸೀಮೆಯನ್ನು ದೂರ ದೂರ ಸರಿಸಿವೆ. ಆದ್ದರಿಂದಲೇ ನಾನು ಎಲ್ಲರಿಗೂ ಎಲ್ಲದಕ್ಕೂ ಉಪಕೃತ. ಬದುಕು ಮುಗಿಯುತ್ತಿದೆ. ದೀಪ ಆರಿದಂತೆ. ತೆರೆ ಅಡಗಿದಂತೆ. ಮೇಘ ಕರಗಿದಂತೆ. ಉಳಿಯುವುದು ಬರೀ ಬಯಲು. ಮಹಾಮೌನ, ಶೂನ್ಯ ಸತ್ಯ. ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು. ಅದಕ್ಕಾಗಿ ಈ ಅಂತಿಮ ಅಭಿವಂದನ ಪತ್ರ.

ದೇಹದ ವಿಷಯದಲ್ಲಿ ಒಂದೆರಡು ಆಶಯಗಳು -
ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯರ್ಪಿತ ಮಾಡುವುದು. ಶ್ರಾದ್ಧಿಕ ವಿಧಿ-ವಿಧಾನಕರ್ಮಗಳು ಅನಗತ್ಯ. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು. ಯಾವುದೇ ಬಗೆಯ ಸ್ಮಾರಕ ನಿರ್ಮಿಸಲಾಗದು.

ಅಂತಿಮ ನೆನಹು; "ಸತ್ಯವೂ ಇಲ್ಲ, ಅಸತ್ಯವೂ ಇಲ್ಲ. ಸಹಜವೂ ಇಲ್ಲ, ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ, ಇಲ್ಲ ಎಂಬುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು". ಅಂತ್ಯಃ ಪ್ರಣಾಮಾಂಜಲಿಃ! ಎಂದು ಅಭಿವಂದನಾ ಪತ್ರವನ್ನು ಶ್ರೀಗಳು ಬರೆದಿದ್ದಾರೆ.

RELATED TOPICS:
English summary :Offer the body to fire, do not build a monument: What is in Siddeshwar Sri final eulogy?

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...