Fri,Mar31,2023
ಕನ್ನಡ / English

ನಾಯಿ ರೀತಿ ಧೈರ್ಯದಿಂದ ಕೇಂದ್ರದಿಂದ ಪಾಲು ತೆಗೆದುಕೊಳ್ಳಬೇಕು: ವಿವಾದಾತ್ಮಕ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ | JANATA NEWS

05 Jan 2023
768

ಮಂಗಳೂರು : ನಾನು ಸದುದ್ದೇಶದಿಂದ ಹೇಳಿದ್ದೇನೆ. ರಾಜ್ಯದ ಹಿತದೃಷ್ಟಿಯಿಂದ ಧೈರ್ಯ ತೋರಿಸಬೇಕೆಂದು ಹೇಳಿದ್ದೇನೆ. ಕೇಂದ್ರ ಸರ್ಕಾರದಿಂದ ಅನುದಾನ ಸರಿಯಾಗಿ ಬಂದಿಲ್ಲ. ಅನುದಾನ ಎಲ್ಲಾ ಕಡಿಮೆಯಾಗಿದೆ. ಆ ಅರ್ಥದಲ್ಲಿ ಹೇಳಿದ್ದೇನೆಯೇ ಹೊರತು ಬೇರೆ ಕಾರಣಕ್ಕೆ ಅಲ್ಲ ಎಂದು ಸ್ಪಷ್ಟಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಇಂದು ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಬಳಿಕ ಮಾತನಾಡಿದ ಅವರು, ”ನಾನು ನಾಯಿ ಮರಿ ಅಂತ ನಾನು ಹೇಳಿಲ್ಲ.ಧೈರ್ಯ ಇರಬೇಕು.ರಾಜ್ಯದ ಹಿತ ಬಹಳ ಮುಖ್ಯ. ಕೇಂದ್ರ ಸರ್ಕಾರದಿಂದ ಅನುದಾನ ತರುವಲ್ಲಿ ಅವರು ಧೈರ್ಯ ತೋರಬೇಕು.ನಾಯಿ ಮರಿ ತರ ಇರಬಾರದು ಅಂತ ಹೇಳಿದ್ದೆ ಅಷ್ಟೇ. ಅದು ಅಸಂಸದೀಯ ಪದ ಅಲ್ಲ. ನನಗೆ ಟಗರು, ಹುಲಿಯ ಅಂತ ಕರೆಯುತ್ತಾರೆ. ಯಡಿಯೂರಪ್ಪ ಅವರಿಗೆ ರಾಜಾ ಹುಲಿ ಅಂತ ಅವರ ಪಕ್ಷದವರೇ ಕರೆಯುತ್ತಾರೆ. ಹಾಗಾದರೆ ಯಡಿಯೂರಪ್ಪ ಅವರು ಹುಲಿನಾ” ಎಂದು ಪ್ರಶ್ನಿಸಿದರು.

ಧೈರ್ಯವಾಗಿ ಇರಬೇಕು ಅಂತಾ ಹೇಳಿದ್ದೇನೆಯೇ ಹೊರತು ನಾಯಿ ಮರಿ ಅಂತಾ ಅಲ್ಲ. ನನ್ನನ್ನು ಟಗರು, ಹುಲಿಯಾ ಅಂತಾ ಕರೆಯುತ್ತಾರೆ. ಅದು ಅಸಂವಿಧಾನ ಪದ ಹೇಗೆ ಆಗುತ್ತದೆ. ಯಡಿಯೂರಪ್ಪ ಅವರನ್ನು ರಾಜಾಹುಲಿ ಅಂತಾ ಅವರ ಪಕ್ಷದವರೇ ಕರೆಯುತ್ತಾರೆ. ಹಾಗಾದರೆ ಯಡಿಯೂರಪ್ಪ ಹುಲಿನಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ನಾಯಿ ನಂಬಿಕೆಗಸ್ಥ ಪ್ರಾಣಿ. ನಾಯಿ ರೀತಿ ಧೈರ್ಯದಿಂದ ಕೇಂದ್ರದಿಂದ ಪಾಲು ತೆಗೆದುಕೊಳ್ಳಬೇಕು ಎಂದು ಹೇಳಿದ್ದೇನೆ ಅಂತ ಸ್ಪಷ್ಟನೆ ನೀಡಿದರು.

RELATED TOPICS:
English summary :Courage like a dog should take stake from the Centre: Siddaramaiah clarifies controversial statement

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...