Thu,Apr25,2024
ಕನ್ನಡ / English

ಪತಿಯ ಜತೆ ಸೇರಿ‌ ಪ್ರಿಯಕರನ ಹತ್ಯೆ, ಶವದೊಂದಿಗೆ ಬೈಕ್​​ನಲ್ಲಿ ಥ್ರಿಬಲ್​ ರೈಡ್ | JANATA NEWS

08 Jan 2023
2106

ಬೆಂಗಳೂರು : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಮುಗಿಸಲು ಮಹಿಳೆ ಪ್ಲ್ಯಾನ್ ಮಾಡಿದ್ದಳು, ಆದರೆ ಪ್ರಿಯಕರನೇ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರೀನಾ ಹಾಗೂ ಗಂಗೇಶ್ ದಂಪತಿ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ವಾಸವಿದ್ದರು. ಗಂಗೇಶ್ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದರೆ, ರೀನಾ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದಳು. ಈ ನಡುವೆ ಕೊರಿಯರ್ ಡಿಲವರಿ ಮಾಡುತ್ತಿದ್ದ ಅಸ್ಸಾಂ ಮೂಲದ ನಿಬಾಶಿಸ್ ಪಾಲ್ ಮತ್ತು ರೀನಾ ಪರಿಚಯವಾಗಿ ಬಳಿಕ ದೈಹಿಕ ಸಂಬಂಧಕ್ಕೆ ತಿರುಗಿತ್ತು.

ಇಬ್ಬರು ಒಂದಾಗಲು ಗಂಡನನ್ನೇ ಕೊಲೆ ಮಾಡಲು ರೀನಾ ಸ್ಕೆಚ್​ ಸಿದ್ದಪಡಿಸಿದ್ದಳಂತೆ. ಆದರೆ ಈ ವಿಚಾರ ತಿಳಿದ ಪತಿ ಗಂಗೇಶ್, ತನ್ನ ಪತ್ನಿಯನ್ನು ನಗರದಲ್ಲೇ ಬಿಟ್ಟು ಉತ್ತರ ಪ್ರದೇಶ ಸ್ವಗ್ರಾಮಕ್ಕೆ ತೆರಳಿದ್ದ. ಇಷ್ಟೇ ಸಾಕು ಅಂದುಕೊಂಡಿದ್ದ ರೀನಾ, ಪ್ರಿಯಕರನೊಂದಿಗೆ ಸುತ್ತಾಡಿಕೊಂಡಿದ್ದಳು.

ಆದರೆ ಕೆಲ ದಿನಗಳ ಬಳಿಕ ತನ್ನ ನೈಜ ಮುಖ ತೋರಿಸಿದ್ದ ಪ್ರಿಯಕರ, ರೀನಾಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಲು ಶುರು ಮಾಡಿದ್ದನಂತೆ. ಅಲ್ಲದೇ ಬೇರೆ ಪುರುಷರೊಂದಿಗೆ ಮಲಗಿಕೊಳ್ಳವಂತೆ ಒತ್ತಾಯ ಮಾಡುತ್ತಿದ್ದನಂತೆ.

ಪ್ರಿಯಕರನ ಹಿಂಸೆ ತಾಳಲಾಗದೆ, ಮತ್ತೆ ಗಂಡನ ಪಾದವೇ ಮೇಲು ಎಂದುಕೊಂಡಿದ್ದ ರೀನಾ, ಗಂಗೇಶ್​ಗೆ ಕರೆ ಮಾಡಿ ತನಗೆ ಆಗುತ್ತಿದ್ದ ಹಿಂಸೆಗಳನ್ನು ಹೇಳಿಕೊಂಡಿದ್ದಳಂತೆ. ಅಲ್ಲದೇ ಇದೊಂದು ಬಾರಿ ನನ್ನದು ತಪ್ಪಾಗಿದೆ, ದಯವಿಟ್ಟು ಕ್ಷಮಿಸಿ ಬಿಡಿ ಅಂತ ಕೇಳಿಕೊಂಡಿದ್ದಾಳೆ.

ಡಿ. 3ರಂದು ಆರೋಪಿಗಳು ನಿಭಾಶಿಸ್​​ನ ಕತ್ತು ಬಿಗಿದು ಕೊಲೆಗೈದಿದ್ದರು. ಸುಮಾರು 3 ರಿಂದ 4 ಗಂಟೆ ಕಾಲ ಬೈಕ್​ ಮೇಲೆ ಮೃತದೇಹವನ್ನು ಇಟ್ಟುಕೊಂಡು ಸೂಕ್ತ ಸ್ಥಳಕ್ಕಾಗಿ ಹುಡುಕಾಟ ನಡೆಸಿದ್ದರು. ಆದರೆ ಯಾವುದೇ ಸ್ಥಳ ಸಿಗದ ಕಾರಣ ತಮಿಳುನಾಡಿನ ಹೊಸೂರು ಮಾರ್ಗಕ್ಕೆ ತೆರಳಿ ನಿರ್ಜನ ಪ್ರದೇಶವೊಂದರಲ್ಲಿ ಮೃತದೇಹ ಎಸೆದು ಬಂದಿದ್ದರು.ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿಗಳ ಕೃತ್ಯ ಬಯಲಾಗಿದೆ.

RELATED TOPICS:
English summary :Murder of lover along with husband, triple ride on bike with dead body

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...