Fri,Mar31,2023
ಕನ್ನಡ / English

ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ :ಡಿಕೆ ಶಿವಕುಮಾರ್ ಘೋಷಣೆ | JANATA NEWS

11 Jan 2023
1677

ಬೆಳಗಾವಿ : ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್​ ವಿದ್ಯುತ್​ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಮಕುಮಾರ್​ ಹೇಳಿದರು.

ಬಿಜೆಪಿ ಸರ್ಕಾರದ ದುರಾಡಳಿತದಿಂದ, ಬೆಲೆಯೇರಿಕೆಯಿಂದ ದುಬಾರಿಯಾಗಿರುವ ಜನರ ಜೀವನ ನಿರ್ವಹಣೆಗೆ ಪರಿಹಾರವಾಗಿ ಕಾಂಗ್ರೆಸ್ ಪಕ್ಷವು ಮೊದಲ ಭರವಸೆಯನ್ನು ಇಂದು ಘೋಷಿಸುತ್ತಿದೆ.

ಬಿಜೆಪಿಯವರು ಎಲ್ಲರ ಬದುಕಿನಲ್ಲಿ ಚೆಲ್ಲಾಟ ಆಡಿಕೊಂಡು ಬಂದರು. ರೈತರ ಆದಾಯ ಡಬಲ್​ ಮಾಡುತ್ತೇವೆ ಎಂದು ಮೋದಿ ಹೇಳಿದ್ದರು. ಆದರೆ ರೈತರ ಆದಾಯ ಡಬಲ್ ಆಗಲಿಲ್ಲ, ಸಾಲಮನ್ನಾವೂ ಆಗಲಿಲ್ಲ. ಇದೇ ಕಾರಣಕ್ಕೆ ಬಿಜೆಪಿಯ ಪಾಪದಪುರಾಣ ಬಿಡುಗಡೆ ಮಾಡಿದ್ದೇವೆ. ಲಂಚಾವತಾರ, ಮಂಚಾವತಾರ, ಬಿ ರಿಪೋರ್ಟ್ ನೀಡುವ ಸರ್ಕಾರ, ಬಿಜೆಪಿಯವರು ಕೋಮು ದ್ವೇಷದ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಕಿಡಿ ಕಾರಿದರು.

ಕಾಂಗ್ರೆಸ್ ಪಕ್ಷ ಜನರ ಸಮಸ್ಯೆ, ನೋವು ಅಭಿಪ್ರಾಯ ಸಂಗ್ರಹಿಸುತ್ತಿದೆ. ನಿಮಗೆ ಶಕ್ತಿ ಕೊಡಬೇಕು. ಬೆಳಕು ಕೊಡಬೇಕು ಅಂತಾ ನಾವೆಲ್ಲಾ ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆ. ಬುದ್ಧ, ಬಸವ ಮನೆ ಬಿಟ್ಟ ಘಳಿಗೆ, ಮಹಾತ್ಮ ಗಾಂಧಿ ನಾಯಕತ್ವ ವಹಿಸಿಕೊಂಡ ಘಳಿಗೆಯಲ್ಲಿ ಕಾರ್ಯಕ್ರಮ ಪ್ರಾರಂಭ ಮಾಡಿದ್ದೇವೆ ಎಂದರು.

ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ‘ಗೃಹಜ್ಯೋತಿ’ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲಿದೆ. ನಿಮ್ಮ ವಿದ್ಯುತ್ ಬಿಲ್ ಇನ್ಮುಂದೆ ಕಾಂಗ್ರೆಸ್ ಜವಾಬ್ದಾರಿ.ಇದು ಕಾಂಗ್ರೆಸ್ ಗ್ಯಾರಂಟಿ ಎಂದು ರಾಜ್ಯ ಕಾಂಗ್ರೆಸ್ ಚುನಾವಣಾ ಪೂರ್ವ ಭರವಸೆ ನೀಡಿದೆ.

ಕತ್ತಲೆಯಿಂದ ಬೆಳಕಿನೆಡೆಗೆ ಸಾಗಲಿ ಕರ್ನಾಟಕ, ಇದು ಕಾಂಗ್ರೆಸ್‌ನ ಸದಾಶಯ. 2022ರ ಒಂದೇ ವರ್ಷದ ಅವಧಿಯಲ್ಲಿ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ ಬಿಜೆಪಿ ಸರ್ಕಾರ 4 ವರ್ಷದಲ್ಲಿ 8ಕ್ಕೂ ಹೆಚ್ಚು ಬಾರಿ ದರ ಏರಿಸಿದೆ. ಮುಂದಿನ ಕಾಂಗ್ರೆಸ್ ಸರ್ಕಾರ ಜನರ ಬದುಕಿಗೆ ಬೆಳಕಾಗಲಿದೆ ಎಂದು ಟ್ವೀಟ್ ಮಾಡಿದೆ.

RELATED TOPICS:
English summary :200 units of free electricity for every house in the state: DK Shivakumar announcement

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...