Sun,May19,2024
ಕನ್ನಡ / English

ಮೂರು ಸೇವೆಗಳ ಅಗ್ನಿವೀರರ ಮೊದಲ ಬ್ಯಾಚ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ | JANATA NEWS

16 Jan 2023
3815

ನವದೆಹಲಿ : ಪ್ರಪ್ರಥಮ ಅಗ್ನಿಪಥ್ ಯೋಜನೆಯ ಪ್ರವರ್ತಕರಾದ ಅಗ್ನಿವೀರರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು. ತಮ್ಮ ಪ್ರಾಥಮಿಕ ತರಬೇತಿಯನ್ನು ಆರಂಭಿಸಿರುವ ಮೂರು ಸೇವೆಗಳ ಅಗ್ನಿವೀರರ ಮೊದಲ ಬ್ಯಾಚ್ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ಅವರು ಮಾತನಾಡಿದರು.

ಈ ಪರಿವರ್ತನಾ ನೀತಿಯು ನಮ್ಮ ಸಶಸ್ತ್ರ ಪಡೆಗಳನ್ನು ಸಶಕ್ತಗೊಳಿಸುವಲ್ಲಿ ಮತ್ತು ಅವರನ್ನು ಭವಿಷ್ಯದ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸುವಲ್ಲಿ ಹೊಸ ಇತಿಹಾಸವನ್ನೇ ಬರೆಯಲಿದೆ ಎಂದು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು. ಯುವ ಅಗ್ನಿವೀರರು ಸಶಸ್ತ್ರ ಪಡೆಗಳನ್ನು ಹೆಚ್ಚು ತಾರುಣ್ಯಭರಿತ ಮತ್ತು ಟೆಕ್ ಸೆವಿಯನ್ನಾಗಿ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

21ನೇ ಶತಮಾನದಲ್ಲಿ ಯುದ್ಧ ಮಾಡುವ ರೀತಿ ಬದಲಾಗುತ್ತಿದೆ ಎಂದು, ಸಂಪರ್ಕರಹಿತ ಯುದ್ಧದ ಹೊಸ ರಂಗಗಳು ಮತ್ತು ಸೈಬರ್ ಯುದ್ಧದ ಸವಾಲುಗಳನ್ನು ಚರ್ಚಿಸಿದ ಅವರು, ನಮ್ಮ ಸಶಸ್ತ್ರ ಪಡೆಗಳಲ್ಲಿ ತಾಂತ್ರಿಕವಾಗಿ ಮುಂದುವರಿದ ಸೈನಿಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು. ವಿಶೇಷವಾಗಿ ಪ್ರಸ್ತುತ ಯುವ ಪೀಳಿಗೆಯು ಈ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಆದ್ದರಿಂದ ಮುಂಬರುವ ದಿನಗಳಲ್ಲಿ ನಮ್ಮ ಸಶಸ್ತ್ರ ಪಡೆಗಳಲ್ಲಿ ಅಗ್ನಿವೀರರು ಪ್ರಮುಖ ಪಾತ್ರ ವಹಿಸುತ್ತಾರೆ, ಎಂದರು.

ಈ ಯೋಜನೆಯು ಮಹಿಳೆಯರನ್ನು ಮತ್ತಷ್ಟು ಸಬಲೀಕರಣಗೊಳಿಸುವುದು ಕುರಿತು ಪ್ರಧಾನಮಂತ್ರಿ ಮಾತನಾಡಿದರು. ಮಹಿಳಾ ಅಗ್ನಿವೀರರು ನೌಕಾ ಪಡೆಯ ಹೆಮ್ಮೆಯನ್ನು ಹೆಚ್ಚಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ಮೂರೂ ಪಡೆಗಳಲ್ಲಿ ಮಹಿಳಾ ಅಗ್ನಿವೀರರನ್ನು ಕಾಣಲು ಬಯಸುತ್ತೇನೆ, ಎಂದು ಹೇಳಿದರು. ಸಿಯಾಚಿನ್ ‌ನಲ್ಲಿ ಮಹಿಳಾ ಸೈನಿಕರು ಮತ್ತು ಆಧುನಿಕ ಯುದ್ಧ ವಿಮಾನಗಳ ಹಾರಾಟ ಮಾಡುವ ಮಹಿಳೆಯರ ಉದಾಹರಣೆಗಳನ್ನು ಉಲ್ಲೇಖಿಸಿ, ವಿವಿಧ ರಂಗಗಳಲ್ಲಿ ಮಹಿಳೆಯರು ಹೇಗೆ ಸಶಸ್ತ್ರ ಪಡೆಗಳನ್ನು ಮುನ್ನಡೆಸುತ್ತಿದ್ದಾರೆ, ಎಂಬುದನ್ನು ಪ್ರಧಾನಮಂತ್ರಿ ಸ್ಮರಿಸಿದರು.

ವಿವಿಧ ಪ್ರದೇಶಗಳಲ್ಲಿ ನೇಮಕಗೊಳ್ಳುವುದರಿಂದ ಅವರಿಗೆ ವೈವಿಧ್ಯಮಯ ಅನುಭವಗಳನ್ನು ಪಡೆಯುವ ಅವಕಾಶ ದೊರೆಯುತ್ತದೆ ಮತ್ತು ಅವರು ವಿವಿಧ ಭಾಷೆಗಳನ್ನು ಕಲಿಯಲು ಪ್ರಯತ್ನಿಸಬೇಕು ಮತ್ತು ವಿಭಿನ್ನ ಸಂಸ್ಕೃತಿಗಳು ಮತ್ತು ಜೀವನ ವಿಧಾನಗಳ ಬಗ್ಗೆಯೂ ಕಲಿಯಬೇಕು, ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ಸಾಂಘಿಕ ಕೆಲಸ ಮತ್ತು ನಾಯಕತ್ವದ ಕೌಶಲ್ಯವನ್ನು ಗೌರವಿಸುವುದು ಅವರ ವ್ಯಕ್ತಿತ್ವಕ್ಕೆ ಹೊಸ ಆಯಾಮವನ್ನು ನೀಡುತ್ತದೆ, ಎಂದರು. ತಮ್ಮ ಆಯ್ಕೆಯ ಕ್ಷೇತ್ರಗಳಲ್ಲಿ ತಮ್ಮ ಕೌಶಲ್ಯಾಭಿವೃದ್ಧಿಗಾಗಿ ಏಕಕಾಲದಲ್ಲಿ ಕೆಲಸ ಮಾಡುವಾಗ ಹೊಸ ವಿಷಯಗಳನ್ನು ಕಲಿಯುವ ಬಗ್ಗೆ ಕುತೂಹಲದಿಂದ ಇರಬೇಕೆಂದು ಅವರು ಅಗ್ನಿವೀರರನ್ನು ಉತ್ತೇಜಿಸಿದರು.

English summary :PM Modi addressed the first batch of firemen of the three services

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...