ಬಿಜೆಪಿ ಎಂದರೆ ಸುಳ್ಳನ್ನು ಉತ್ಪಾದಿಸುವ ಫ್ಯಾಕ್ಟರಿ. ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸುತ್ತಾರೆ | JANATA NEWS

ಹುಬ್ಬಳ್ಳಿ : ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು ಕರೆಯಿಸಿ ನಾವೇ ಮಾಡಿದವರೆಂದು ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಅಡುಗೆ ಮಾಡಿದವರು ನಾವು, ಊಟ ಮಾಡುವವರು ಬಿಜೆಪಿಯವರು. ಸೇವಾಲಾಲ ಜಯಂತಿ, ಲಂಬಾಣಿ ಅಭಿವೃದ್ಧಿ ನಿಗಮ ಆರಂಭಿಸಿದ್ದು ನಾವು. ಸೇವಾಲಾಲ ಹುಟ್ಟಿದ ಸ್ಥಳ ಅಭಿವೃದ್ಧಿಪಡಿಸಿದ್ದೇವೆ. 450 ಕೋಟಿ ರೂ. ಅನುದಾನ ನೀಡಿದ್ದೇವೆ. ಲಂಬಾಣಿ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಕೇವಲ ಮೂರು ವರ್ಷದಲ್ಲಿ ಕೇವಲ 70 ಕೋಟಿ ರೂ. ಕೊಟ್ಟಿದ್ದಾರೆ. ಹಕ್ಕು ಪತ್ರ ನಾವು ಸಿದ್ಧಪಡಿಸಿದ್ದೇವೆ. ಈಗ ಅವರು ವಿತರಣೆ ಮಾಡುತ್ತಿದ್ದಾರೆ ಎಂದರು.
ನಮ್ಮ ಸರ್ಕಾರದಲ್ಲಿ 30 ಸಾವಿರ ಕೋಟಿ ರೂ. ಎಸ್ಸಿಇಪಿಟಿ ಹಣವಿತ್ತು. ಈಗ ಅದು 42 ಸಾವಿರ ಕೋಟಿ ರೂ. ಆಗಬೇಕಿತ್ತು. ಆದರೆ 28 ಸಾವಿರ ಕೋಟಿಯಾಗಿದೆ. ಇದರ ಅರ್ಥ ಬಿಜೆಪಿ ಎಸ್ಸಿಇಸ್ಪಿಟಿ ಹಣವನ್ನು ಬೇರೆ ಕಡೆ ಡೈವರ್ಟ್ ಮಾಡಿದ್ದಾರೆ. ಬಿಜೆಪಿ ಎಂದರೆ ಸುಳ್ಳನ್ನು ಉತ್ಪಾದಿಸುವ ಫ್ಯಾಕ್ಟರಿ. ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸುತ್ತಾರೆ. ನರೇಂದ್ರ ಮೋದಿಯವರಿಂದ ಬರೀ ಸುಳ್ಳು ಹೇಳಿಸುತ್ತಿದ್ದಾರೆ ಎಂದರು.
ಬಿಜೆಪಿ ಸುಳ್ಳು ಮ್ಯಾನಿಫ್ಯಾಕ್ಟ್ ಮಾಡುವ ಫ್ಯಾಕ್ಟರಿಯಾಗಿದೆ. ನರೇಂದ್ರ ಮೋದಿಯವರಿಂದ ಬರಿ ಸುಳ್ಳು ಹೇಳಿಸುತ್ತಿದ್ದಾರೆ. ನನಗೆ ಮೋದಿ ಕಂಡ್ರೆ ಭಯವಿಲ್ಲ, ಆದರೆ ನನ್ನ ಕಂಡರೆ ಮೋದಿಗೆ ಭಯ. ನಾನು ಆರ್ಎಸ್ಎಸ್ ಅನ್ನು ಟೀಕೆ ಮಾಡುತ್ತೀನಿ, ಸತ್ಯ ಹೇಳುತ್ತೇನೆ ಎನ್ನುವ ಭಯ ಅವರಿಗಿದೆ ಎಂದರು.