ಬಾಲಕನನ್ನು ಎಳೆದೊಯ್ದ ಚಿರತೆ, ಚಿರತೆ ದಾಳಿಗೆ 11 ವರ್ಷದ ಬಾಲಕ ಬಲಿ | JANATA NEWS
ಮೈಸೂರು : ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆಯ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿದ್ದಾನೆ.
ಹೊರಳಹಳ್ಳಿ ಗ್ರಾಮದ ಜಯಂತ್ (11) ಮೃತ ಬಾಲಕ. ಶನಿವಾರ ರಾತ್ರಿಯಿಂದ ಜಯಂತ್ ನಾಪತ್ತೆಯಾಗಿದ್ದ, ಪೋಷಕರು ಹುಡುಕಾಟ ನಡೆಸುತ್ತಿದ್ದರು.
ಭಾನುವಾರ ಗ್ರಾಮದ ಸಮೀಪ ಇರುವ ಹೊಲದಲ್ಲಿ ಬಾಲಕನ ಶವ ಪತ್ತೆಯಾಗಿದೆ. ಬಾಲಕನ ಸ್ವಲ್ಪ ದೇಹವನ್ನು ಚಿರತೆ ತಿಂದು ಹಾಕಿದ್ದು, ಅದನ್ನು ನೋಡಿದ ತಾಲೂಕಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇದು ನಾಲ್ಕನೇ ಬಲಿಯಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
English summary :Leopard that dragged the boy, 11-year-old boy was killed by the leopard attack