ಕಾಂಗ್ರೆಸ್ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ! | JANATA NEWS
ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೊಷ್ಟಿ ನಡೆಸಿ ಮಾತನಾಡಿ, ಬೆಳಗಾವಿ ಗ್ರಾಮೀಣ ಶಾಸಕಿಯಿಂದ ಶಿವಕುಮಾರ್ ಮತ್ತು ನನ್ನ ಸಂಬಂಧ ಹಾಳಾಗಿದೆ. ಕಾಂಗ್ರೆಸ್ ನಾಶಕ್ಕೆ ಕಾರಣ ಡಿಕೆ ಶಿವಕುಮಾರ್ ಕಂಪನಿ ಹಾಗು ವಿಷಕನ್ಯೆ ಎಂದು ಪರೋಕ್ಷವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕಿಡಿ ಕಾರಿದರು.
ನನ್ನ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮರ್, ಉದ್ಯಮಿ ಪರಶಿವಮೂರ್ತಿ, ನರೇಶ, ಶ್ರವಣ, ಡಿ.ಕೆ. ಶಿವಕುಮಾರ್ ವಾಹನ ಚಾಲಕ ಹಾಗೂ ಮಂಡ್ಯ ಮೂಲದ ಇಬ್ಬರು ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆಗ್ರಹಿಸಿದರು.
ಸಿಡಿ ಪ್ರಕರಣದಲ್ಲಿ ನನ್ನ ಬಳಿ ಸಾಕಷ್ಟು ಸಾಕ್ಷಿಗಳಿವೆ. ಡಿ.ಕೆ.ಶಿವಕುಮಾರ್ ಅವರೇ ಸಿಡಿ ಪ್ರಕರಣದ ಸೂತ್ರದಾರ. ಈ ಕುರಿತು ಕೂಡಲೇ ಆಡಿಯೋ ಬಿಡುಗಡೆ ಮಾಡಿತ್ತೇನೆ. ಈ ವಿಷಯದಲ್ಲಿ ನಾನು ಯಾರಿಗೂ ಹೆದರುವ ವ್ಯಕ್ತಿ ನಾನಲ್ಲ. ಇದನ್ನು ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರದ ಮೂಲಕ ಶಿಫಾರಸ್ಸು ಮಾಡುತ್ತೇನೆ ಎಂದರು.
ಸುಮಾರು ಒಂದು ವರ್ಷದಿಂದ ಸುಮ್ಮನೆ ಕುಳಿತಿದ್ದೆ. ಮಿಸ್ಟರ್ ಶಿವಕುಮಾರ್ ರಾಜಕೀಯ ಮಾಡಲು ನಾಲಾಯಕ್. ಒಬ್ಬ ವ್ಯಕ್ತಿ ಜೀವನ ಹಾಳು ಮಾಡಿ ರಾಜಕೀಯ ಮಾಡುವ ಡಿಕೆ ಶಿವಕುಮಾರ್ ರಾಜಕೀಯ ಮಾಡಲು ಅಯೋಗ್ಯ ವ್ಯಕ್ತಿ. ನಾನು ವೈಯಕ್ತಿಕ ಯಾರನ್ನು ದ್ವೇಷ ಮಾಡುವುದಿಲ್ಲ. ನಾನು ಯಾವುದೇ ಸಿಡಿ ರಿಲೀಜ್ ಮಾಡಲ್ಲ.
ಜಾರಕಿಹೊಳಿ ಯಾವುದೇ ಗಾಳಿಯಲ್ಲಿ ಗುಂಡು ಹಾರಿಸಲ್ಲ. ಡಿಕೆ ಶಿವಕುಮಾರ್ ಒಬ್ಬ ಮಹಿಳೆ ಮುಖಾಂತರ ನನ್ನ ಜೀವನ ಹಾಳು ಮಾಡಿದ್ದಾರೆ. ಶಿವಕುಮಾರ್ ಅವರ ಆಡಿಯೋ ಝಲಕ್ ತೋರಿಸುತ್ತೇನೆ. ಸಿಡಿ ರಿಲೀಜ್ ಮಾಡುವುದಿಲ್ಲ. ಡಿ.ಕೆ. ಶಿವಕುಮಾರ ಸಾವಿರಾರು ಕೋಟಿ ಮಾಲೀಕ. ಸಿಡಿ ಲೇಡಿ ಹಾಗೂ ಅವರಿಗೆ ಸಹಕರಿಸಿದ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.
ಷಡ್ಯಂತ್ರದ ಮೂಲಕ ರಾಜಕಾರಣ ಹಾಳು ಮಾಡುವ ಮತ್ತು ನನ್ನ ರಾಜಕೀಯ ಜೀವನ ಮುಗಿಸಲು ಪ್ರಯತ್ನಿಸಿರುವ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಿ, ಬಂಧಿಸದ ಬಳಿಕವೇ ರಾಜಕೀಯ ದಿಂದ ನಿವೃತ್ತಿ ಆಗುತ್ತಾನೆ ಎಂದು ಘೋಷಿಸಿದರು.
ನಾನು ಸಹಕಾರಿ ಸಚಿವನಾಗಿದ್ದಾಗ ಶಾಂತಿನಗರ ಸಹಕಾರ ಕೊ-ಅಪರೇಟೀವ್ ಸೊಸೈಟಿಯಲ್ಲಿ 10 ಸಾವಿರ ಕೋಟಿ ವ್ಯವಹಾರ ನಡೆದಿತ್ತು. 66 ಎಕರೆಗೆ ಸಂಬಂಧಿಸಿದ್ದಾಗಿತ್ತು. ಈ ವೇಳೆ ಡಿಕೆ ಶಿವಕುಮಾರ್ ನನಗೆ ಫೈಲ್ ಕ್ಲೀಯರ್ ಮಾಡಬೇಕು ಎಂದು ಗಂಟುಬಿದ್ದಿದ್ದ. ಅಲ್ಲಿಂದ ನಮ್ಮಿಬ್ಬರ ಮಧ್ಯೆ ವೈಮನಸ್ಸು ಶುರುವಾಯಿತು ಎಂದರು.