ಮೊಬೈಲ್ ಹೆಚ್ಚು ಬಳಸಬೇಡ ಎಂದು ಹೇಳಿದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ! | JANATA NEWS

ಮಂಗಳೂರು : ಮೊಬೈಲ್ ಹೆಚ್ಚು ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟಿಮುರದಲ್ಲಿರುವ ರೆಡ್ ಬ್ರಿಕ್ಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ ಜ್ಞಾನೇಶ್ (14) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ.
ಜ್ಞಾನೇಶ್ ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಶಾಲೆಯಿಂದ ಸಂಜೆ ಮನೆಗೆ ಬಂದು ಮೊಬೈಲ್ ಬಳಸುತ್ತಿದ್ದ. ಮೊಬೈಲ್ ಬಳಸುವ ವಿಚಾರವಾಗಿ ವಿನಯಾ ಬೈದು ಬುದ್ದಿಹೇಳಿದ್ದಾರೆ.
ಇದರಿಂದ ಮನನೊಂದ ಬಾಲಕ ರೂಮ್ನೊಳಗೆ ಹೋಗಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಗಳೂರಿನ ಕಂಕನಾಡಿ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
English summary :A 14-year-old boy committed suicide after being told not to use his mobile phone too much!